ಬೆಂಗಳೂರು: ನಗರ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ನೆರೆ–ಬರ ಸಂತ್ರಸ್ತರ ಅಧಿವೇಶನಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಬಂದ ಸಚಿವ ವಿ. ಸೋಮಣ್ಣ, ‘ನೆರೆ–ಬರದಿಂದ ಹಾನಿಗೀಡಾದ ಸಂತ್ರಸ್ತರಿಗೆ, ಯಾವ ಪ್ರಮಾಣದ ಹಾನಿಗೆ, ಎಷ್ಟು ಪರಿಹಾರ ನೀಡಬೇಕು ಎಂಬ ಬಗ್ಗೆ ಇನ್ನೂ ಎಂಟು–ಹತ್ತು ದಿನದಲ್ಲಿ ನಿರ್ಧರಿಸಲಾಗುವುದು. ಎಲ್ಲರಿಗೂ ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.