ಬೆಂಗಳೂರು: ‘ನಿವೇಶನ ಇಲ್ಲದಿರುವ ಚಲನಚಿತ್ರ ಕಲಾವಿದರು ಮತ್ತು ರಂಗಭೂಮಿ ಕಲಾವಿದರನ್ನು ಪಟ್ಟಿ ಮಾಡಿ ಅರ್ಜಿ ನೀಡಿದರೆ, ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಒಂದೂವರೆ ತಿಂಗಳಲ್ಲಿ ಅವರಿಗೆ ವಸತಿ ಅಥವಾ ನಿವೇಶನ ಹಂಚಿಕೆ ಮಾಡಲಾಗುವುದು’ ಎಂದುವಸತಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
ವಿ.ಸೋಮಣ್ಣ ಪ್ರತಿಷ್ಠಾನವುಕೆಂಪೇಗೌಡ ಜಯಂತಿ ಅಂಗವಾಗಿ ಗೋವಿಂದರಾಜ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ರಂಗಭೂಮಿ ಕಲಾವಿದರಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್,‘ಬೆಂಗಳೂರು ನಗರ ಖ್ಯಾತಿ ಪಡೆಯಲು ಮೂಲ ಕಾರಣ ಪುರುಷರು ನಾಡಪ್ರಭು ಕೆಂಪೇಗೌಡರು. ಅವರ ಅಭಿವೃದ್ದಿಪರ ಚಿಂತನೆಗಳು ಹಾಗೂ ಯೋಜನೆಗಳನ್ನು ಜಾರಿಯಾದರೆ ಬೆಂಗಳೂರು ಇನ್ನಷ್ಟು ಅಭಿವೃದ್ದಿಯತ್ತ ಸಾಗಲಿದೆ’ ಎಂದರು.