‘ಈ ಹೇಳಿಕೆಯನ್ನು ರಾಜ್ಯದ ಮುಖ್ಯಮಂತ್ರಿ ಈಗಾಗಲೇ ಗಟ್ಟಿ ಧ್ವನಿಯಲ್ಲಿ ಖಂಡಿಸಿದ್ದಾರೆ. ಈಗಾಗಲೇ ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ಅನಗತ್ಯ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿರುವ, ಭಾಷೆ ಮರಾಠಿಯಾದರು ಕನ್ನಡ ಅಸ್ಮಿತೆ ಕಾಪಾಡಿಕೊಂಡು ಬಂದಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ನಾವು ಸಹಿಸುವುದಿಲ್ಲ’ ಎಂದೂ ಸೋಮಶೇಖರ್ ಹೇಳಿದ್ದಾರೆ.