ಬೆಂಗಳೂರು: ರಾಜ್ಯಸಭೆಯ ಜಂಟಿ ಕಾರ್ಯದರ್ಶಿಯಾಗಿ ಕನ್ನಡಿಗ ಅಧಿಕಾರಿ ಡಾ.ಕೆ.ಎಸ್. ಸೋಮಶೇಖರ್ ಅವರನ್ನು ನೇಮಕ ಮಾಡಲಾಗಿದೆ.ಕೋಲಾರ ಜಿಲ್ಲೆ ಶ್ರೀನಿವಾಸಪುರದವರಾದ ಇವರು, ಈ ಹುದ್ದೆಗೆ ಏರಿದ ಮೊದಲ ಕನ್ನಡಿಗ ಅಧಿಕಾರಿ.
ಈ ಮೊದಲು ರಾಜ್ಯಸಭೆಯ ನಿರ್ದೇಶಕರಾಗಿದ್ದರು. ಈ ಹಿಂದೆ ಕೇಂದ್ರದ ರೈಲ್ವೆ ಹಾಗೂ ಜವಳಿ ಸಚಿವರ ಆಪ್ತ ಕಾರ್ಯದರ್ಶಿಯಾಗಿದ್ದರು. ರಾಜ್ಯ ಸೇವೆಗೆ ನಿಯೋಜನೆ ಮೇಲೆ ಬಂದಿದ್ದರು.
ಪ್ರಸ್ತುತ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಜಂಟಿ ಕಾರ್ಯದರ್ಶಿಯಾಗಿ ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ.