ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಜಂಟಿ ಕಾರ್ಯದರ್ಶಿಯಾಗಿ ಸೋಮಶೇಖರ್‌

Last Updated 18 ಜುಲೈ 2020, 22:03 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆಯ ಜಂಟಿ ಕಾರ್ಯದರ್ಶಿಯಾಗಿ ಕನ್ನಡಿಗ ಅಧಿಕಾರಿ ಡಾ.ಕೆ.ಎಸ್‌. ಸೋಮಶೇಖರ್ ಅವರನ್ನು ನೇಮಕ ಮಾಡಲಾಗಿದೆ.ಕೋಲಾರ ಜಿಲ್ಲೆ ಶ್ರೀನಿವಾಸಪುರದವರಾದ ಇವರು, ಈ ಹುದ್ದೆಗೆ ಏರಿದ ಮೊದಲ ಕನ್ನಡಿಗ ಅಧಿಕಾರಿ.

ಈ ಮೊದಲು ರಾಜ್ಯಸಭೆಯ ನಿರ್ದೇಶಕರಾಗಿದ್ದರು. ಈ ಹಿಂದೆ ಕೇಂದ್ರದ ರೈಲ್ವೆ ಹಾಗೂ ಜವಳಿ ಸಚಿವರ ಆಪ್ತ ಕಾರ್ಯದರ್ಶಿಯಾಗಿದ್ದರು. ರಾಜ್ಯ ಸೇವೆಗೆ ನಿಯೋಜನೆ ಮೇಲೆ ಬಂದಿದ್ದರು.

ಪ್ರಸ್ತುತ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌. ವಿಶ್ವನಾಥ್‌ ಅವರ ಆ‍ಪ್ತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಜಂಟಿ ಕಾರ್ಯದರ್ಶಿಯಾಗಿ ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT