<p><strong>ದಾಬಸ್ ಪೇಟೆ:</strong> ಇಲ್ಲಿನ ಸೋಂಪುರ ಗ್ರಾಮ ಪಂಚಾಯಿತಿಯ ಮುಂದೆ ತಿಮ್ಮನಾಯಕನಹಳ್ಳಿ ಗ್ರಾಮಸ್ಥರು ಕಸವನ್ನು ಸುರಿದು ಪ್ರತಿಭಟನೆ ಮಾಡಿದ್ದಾರೆ.</p>.<p>ಬುಧವಾರ ಗ್ರಾಮಸ್ಥರೊಬ್ಬರು ಮೃತಪಟ್ಟಿದ್ದರಿಂದ ಅಂತ್ಯಕ್ರಿಯೆ ಮಾಡಲು ಊರಿನವರು ಸ್ಮಶಾನಕ್ಕೆ ಹೋಗಿ ನೋಡಿದರೆ, ಅಲ್ಲಿ ಬರೀ ತ್ಯಾಜ್ಯ ತುಂಬಿತ್ತು. ಇದರಿಂದ ಕಂಗಾಲಾದ ಗ್ರಾಮಸ್ಥರು ಕಸವನ್ನು ತುಂಬಿಕೊಂಡು ಬಂದು ಪಂಚಾಯತಿ ಕಛೇರಿ ಮುಂದೆ ಸುರಿದು ಪ್ರತಿಭಟನೆ ಮಾಡಿದರು.</p>.<p>ಸ್ಮಶಾನಕ್ಕಾಗಿ ಗ್ರಾಮಕ್ಕೆ ಕಂದಾಯ ಇಲಾಖೆ ಎರಡು ಎಕರೆ ಜಮೀನನ್ನು ನೀಡಿತ್ತು. ಇದಕ್ಕೆ ಸೋಂಪುರ ಗ್ರಾಮ ಪಂಚಾಯಿತಿ ಕಾಂಪೌಂಡ್ ಹಾಕದೆ ಹಾಗೆಯೇ ಬಿಟ್ಟಿದ್ದರು. ಇಲ್ಲಿ ದಿನ ನಿತ್ಯ ಕಸ ತಂದು ಸುರಿಯುತ್ತಿರುವುದರಿಂದ ಸ್ಮಶಾನ ಮುಚ್ಚುವ ಪರಿಸ್ಥಿತಿಗೆ ಬಂದಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಗ್ರಾಮಸ್ಥ ಮಹದೇವಯ್ಯ ಮಾತನಾಡಿ, ‘ಗ್ರಾಮದಲ್ಲಿ ಸಾಕಷ್ಟು ಜಮೀನು ಕೆಐಎಡಿಬಿ ಸ್ವಾಧೀನ ಮಾಡಿಕೊಂಡಿದೆ. ಸ್ಮಶಾನಕ್ಕಾಗಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಎರಡು ಎಕರೆ ಜಾಗ ಪಡೆದುಕೊಳ್ಳಲಾಗಿದೆ. ಈ ಜಾಗವನ್ನು ಪಂಚಾಯಿತಿಯವರು ಅಭಿವೃದ್ಧಿ ಮಾಡಬೇಕಿತ್ತು. ಆದರೆ ಸೋಂಪುರ ಗ್ರಾಮ ಪಂಚಾಯತಿ ಆಡಳಿತ ನಿರ್ಲಕ್ಷ್ಯವಹಿಸಿದೆ’ ಎಂದು ಆರೋಪಿಸಿದರು.</p>.<p>ಪಂಚಾಯಿತಿ ಅಧ್ಯಕ್ಷರಾದ ಇಂದ್ರಮ್ಮ ಪ್ರತಿಕ್ರಿಯಿಸಿ, ಮುಂದೆ ಈ ರೀತಿ ಗಮನಹರಿಸಿ ಸ್ಮಶಾನದ ಅಭಿವೃದ್ಧಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಇಲ್ಲಿನ ಸೋಂಪುರ ಗ್ರಾಮ ಪಂಚಾಯಿತಿಯ ಮುಂದೆ ತಿಮ್ಮನಾಯಕನಹಳ್ಳಿ ಗ್ರಾಮಸ್ಥರು ಕಸವನ್ನು ಸುರಿದು ಪ್ರತಿಭಟನೆ ಮಾಡಿದ್ದಾರೆ.</p>.<p>ಬುಧವಾರ ಗ್ರಾಮಸ್ಥರೊಬ್ಬರು ಮೃತಪಟ್ಟಿದ್ದರಿಂದ ಅಂತ್ಯಕ್ರಿಯೆ ಮಾಡಲು ಊರಿನವರು ಸ್ಮಶಾನಕ್ಕೆ ಹೋಗಿ ನೋಡಿದರೆ, ಅಲ್ಲಿ ಬರೀ ತ್ಯಾಜ್ಯ ತುಂಬಿತ್ತು. ಇದರಿಂದ ಕಂಗಾಲಾದ ಗ್ರಾಮಸ್ಥರು ಕಸವನ್ನು ತುಂಬಿಕೊಂಡು ಬಂದು ಪಂಚಾಯತಿ ಕಛೇರಿ ಮುಂದೆ ಸುರಿದು ಪ್ರತಿಭಟನೆ ಮಾಡಿದರು.</p>.<p>ಸ್ಮಶಾನಕ್ಕಾಗಿ ಗ್ರಾಮಕ್ಕೆ ಕಂದಾಯ ಇಲಾಖೆ ಎರಡು ಎಕರೆ ಜಮೀನನ್ನು ನೀಡಿತ್ತು. ಇದಕ್ಕೆ ಸೋಂಪುರ ಗ್ರಾಮ ಪಂಚಾಯಿತಿ ಕಾಂಪೌಂಡ್ ಹಾಕದೆ ಹಾಗೆಯೇ ಬಿಟ್ಟಿದ್ದರು. ಇಲ್ಲಿ ದಿನ ನಿತ್ಯ ಕಸ ತಂದು ಸುರಿಯುತ್ತಿರುವುದರಿಂದ ಸ್ಮಶಾನ ಮುಚ್ಚುವ ಪರಿಸ್ಥಿತಿಗೆ ಬಂದಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಗ್ರಾಮಸ್ಥ ಮಹದೇವಯ್ಯ ಮಾತನಾಡಿ, ‘ಗ್ರಾಮದಲ್ಲಿ ಸಾಕಷ್ಟು ಜಮೀನು ಕೆಐಎಡಿಬಿ ಸ್ವಾಧೀನ ಮಾಡಿಕೊಂಡಿದೆ. ಸ್ಮಶಾನಕ್ಕಾಗಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಎರಡು ಎಕರೆ ಜಾಗ ಪಡೆದುಕೊಳ್ಳಲಾಗಿದೆ. ಈ ಜಾಗವನ್ನು ಪಂಚಾಯಿತಿಯವರು ಅಭಿವೃದ್ಧಿ ಮಾಡಬೇಕಿತ್ತು. ಆದರೆ ಸೋಂಪುರ ಗ್ರಾಮ ಪಂಚಾಯತಿ ಆಡಳಿತ ನಿರ್ಲಕ್ಷ್ಯವಹಿಸಿದೆ’ ಎಂದು ಆರೋಪಿಸಿದರು.</p>.<p>ಪಂಚಾಯಿತಿ ಅಧ್ಯಕ್ಷರಾದ ಇಂದ್ರಮ್ಮ ಪ್ರತಿಕ್ರಿಯಿಸಿ, ಮುಂದೆ ಈ ರೀತಿ ಗಮನಹರಿಸಿ ಸ್ಮಶಾನದ ಅಭಿವೃದ್ಧಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>