<p><strong>ಬೆಂಗಳೂರು:</strong> ಖಿನ್ನತೆಯಿಂದ ಬಳಲುತ್ತಿದ್ದ ಮಗ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಶವದ ಮುಂದೆ ಕಣ್ಣೀರಿಡುತ್ತಿದ್ದ ತಾಯಿ ಕೂಡ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ನಗರದ ಕಾವೇರಿಪುರದಲ್ಲಿ ಭಾನುವಾರ ನಡೆದಿದೆ.</p>.<p>ಅರುಣ್ ಕುಮಾರ್ (37) ಮೃತ ಕ್ಯಾಬ್ ಚಾಲಕ. ಮಗನ ಸಾವಿನಿಂದ ಆಘಾತಕ್ಕೆ ಒಳಗಾಗಿ ತಾಯಿ ಸರಸ್ವತಿ ಬಾಯಿ (78) ಸಹ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೂ ಮುನ್ನ ಅರುಣ್ ಮರಣ ಪತ್ರ ಬರೆದಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅರುಣ್ಗೆ ಇನ್ನೂ ವಿವಾಹವಾಗಿರಲಿಲ್ಲ. ಬೆಳಿಗ್ಗೆ ತಮ್ಮ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ವರ್ಷದ ಹಿಂದೆ ಬಿದ್ದು ಬೆನ್ನಿನ ಮೂಳೆ ಮುರಿದುಕೊಂಡಿದ್ದ ಸರಸ್ವತಿ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಅರುಣ್ ಅವರೇ ತಾಯಿ ಆರೈಕೆ ಮಾಡುತ್ತಿದ್ದರು. ಅವರ ಇಬ್ಬರು ಸಹೋದರರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.</p>.<p>ತಾಯಿಯ ಸಂಪೂರ್ಣ ಜವಾಬ್ದಾರಿ ಅರುಣ್ ಮೇಲೆಯೇ ಇತ್ತು. ಕ್ಯಾಬ್ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅವರು, ತಾಯಿಯ ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ಸ್ವಲ್ಪ ಸಾಲ ಮಾಡಿದ್ದರು. ಅದೇ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಖಿನ್ನತೆಯಿಂದ ಬಳಲುತ್ತಿದ್ದ ಮಗ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಶವದ ಮುಂದೆ ಕಣ್ಣೀರಿಡುತ್ತಿದ್ದ ತಾಯಿ ಕೂಡ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ನಗರದ ಕಾವೇರಿಪುರದಲ್ಲಿ ಭಾನುವಾರ ನಡೆದಿದೆ.</p>.<p>ಅರುಣ್ ಕುಮಾರ್ (37) ಮೃತ ಕ್ಯಾಬ್ ಚಾಲಕ. ಮಗನ ಸಾವಿನಿಂದ ಆಘಾತಕ್ಕೆ ಒಳಗಾಗಿ ತಾಯಿ ಸರಸ್ವತಿ ಬಾಯಿ (78) ಸಹ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೂ ಮುನ್ನ ಅರುಣ್ ಮರಣ ಪತ್ರ ಬರೆದಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅರುಣ್ಗೆ ಇನ್ನೂ ವಿವಾಹವಾಗಿರಲಿಲ್ಲ. ಬೆಳಿಗ್ಗೆ ತಮ್ಮ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ವರ್ಷದ ಹಿಂದೆ ಬಿದ್ದು ಬೆನ್ನಿನ ಮೂಳೆ ಮುರಿದುಕೊಂಡಿದ್ದ ಸರಸ್ವತಿ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಅರುಣ್ ಅವರೇ ತಾಯಿ ಆರೈಕೆ ಮಾಡುತ್ತಿದ್ದರು. ಅವರ ಇಬ್ಬರು ಸಹೋದರರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.</p>.<p>ತಾಯಿಯ ಸಂಪೂರ್ಣ ಜವಾಬ್ದಾರಿ ಅರುಣ್ ಮೇಲೆಯೇ ಇತ್ತು. ಕ್ಯಾಬ್ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅವರು, ತಾಯಿಯ ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ಸ್ವಲ್ಪ ಸಾಲ ಮಾಡಿದ್ದರು. ಅದೇ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>