ಬಾಣಾವರ: ಕೋವಿಡ್ ಲಸಿಕೆ ಪಡೆದ ಬಳಿಕ ತಮ್ಮ ಮಗ ವಸಂತ ನಾಯಕ್ (35) ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಸಮೀಪದ ಬೋರನಕೊಪ್ಪಲು ಗ್ರಾಮದ ವಸಂತ ಸೆ. 4 ರಂದು ಬೆಂಗಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕೆ ಪಡೆದು ಗ್ರಾಮಕ್ಕೆ ಮರಳಿದ್ದರು ಸೋಮ ವಾರ ಅಸ್ವಸ್ಥಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹಿಮ್ಸ್ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟರು.
‘ಮಗನ ಸಾವಿಗೆ ಕೋವಿಡ್-19 ಲಸಿಕೆ ಕಾರಣ. ಯಾವುದೇ ಕಾಯಿಲೆಗಳಿರಲಿಲ್ಲ. ಆ ಬಗ್ಗೆ ತನಿಖೆಯಾಗಬೇಕು ಹಾಗೂ ಪರಿಹಾರ ನೀಡಬೇಕು’ ಎಂದು ಪೋಷಕರು ಒತ್ತಾಯಿಸಿದ್ದಾರೆ.
‘ಲಸಿಕೆಗೂ ಸಾವಿಗೂ ಯಾವುದೇ ಸಂಬಂಧವಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಕಾರಣ ತಿಳಿಯಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಕ್ಸಿನ್ ಪಡೆದು ಗ್ರಾಮಕ್ಕೆ ಬಂದಿದ್ದಾರೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ತಿಳಿಸಿದ್ದಾರೆ.