ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಪಡೆದ ನಂತರ ಮಗ ಸಾವು: ಪೋಷಕರ ಆರೋಪ‍

Last Updated 6 ಸೆಪ್ಟೆಂಬರ್ 2021, 21:35 IST
ಅಕ್ಷರ ಗಾತ್ರ

ಬಾಣಾವರ: ಕೋವಿಡ್‌ ಲಸಿಕೆ ಪಡೆದ ಬಳಿಕ ತಮ್ಮ ಮಗ ವಸಂತ ನಾಯಕ್‌ (35) ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಸಮೀಪದ ಬೋರನಕೊಪ್ಪಲು ಗ್ರಾಮದ ವಸಂತ ಸೆ. 4 ರಂದು ಬೆಂಗಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕೆ ಪಡೆದು ಗ್ರಾಮಕ್ಕೆ ಮರಳಿದ್ದರು ಸೋಮ
ವಾರ ಅಸ್ವಸ್ಥಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹಿಮ್ಸ್ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟರು.

‘ಮಗನ ಸಾವಿಗೆ ಕೋವಿಡ್-19 ಲಸಿಕೆ ಕಾರಣ. ಯಾವುದೇ ಕಾಯಿಲೆಗಳಿರಲಿಲ್ಲ. ಆ ಬಗ್ಗೆ ತನಿಖೆಯಾಗಬೇಕು ಹಾಗೂ ಪರಿಹಾರ ನೀಡಬೇಕು’ ಎಂದು ಪೋಷಕರು ಒತ್ತಾಯಿಸಿದ್ದಾರೆ.

‘ಲಸಿಕೆಗೂ ಸಾವಿಗೂ ಯಾವುದೇ ಸಂಬಂಧವಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಕಾರಣ ತಿಳಿಯಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಕ್ಸಿನ್ ಪಡೆದು ಗ್ರಾಮಕ್ಕೆ ಬಂದಿದ್ದಾರೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT