<p><strong>ಬೆಂಗಳೂರು:</strong> ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕ<br>ರಣದ ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಉತ್ತರ ನೀಡಲು ನಿರ್ದೇಶನ ನೀಡಿರುವುದನ್ನು ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ (ಎನ್ಎಫ್ಐಡಬ್ಲ್ಯು) ರಾಜ್ಯ ಸಮಿತಿ ಸ್ವಾಗತಿಸಿದೆ.</p><p>ಬಾಲಕಿ ಸೌಜನ್ಯ ಪ್ರಕರಣದ ಮರುತನಿಖೆಗೆ ಕೋರಿ ಆಕೆಯ ತಾಯಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿ ನಿರ್ದೇಶನ ನೀಡಿರುವುದು ಕಗ್ಗತ್ತಲ<br>ಲ್ಲಿರುವ ನಮಗೆ ಕೊಂಚ ಬೆಳಕಿನ ಆಶಾಕಿರಣ ಮೂಡಿಸಿದೆ. ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಉತ್ತರ ನೀಡುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮರುತನಿಖೆಯಿಂದ ಹಿಂದೆ ಸರಿಯಬಾರದು ಹಾಗೂ ಸಾಕ್ಷ್ಯಗಳಿಲ್ಲ ಎಂಬಂತಹ ಸುಳ್ಳು ನೆಪಗಳನ್ನು ನೀಡಬಾರದು ಎಂದು ಎನ್ಎಫ್ಐಡಬ್ಲ್ಯು ಅಧ್ಯಕ್ಷೆ ಎ.ಜ್ಯೋತಿ ತಿಳಿಸಿದ್ದಾರೆ.</p><p>ಎಸ್ಐಟಿ ಎಲ್ಲಾ ರೀತಿಯ ಸಹಕಾರ ನೀಡಿ, ನೊಂದ ಮಹಿಳೆಯರಿಗೆ ಮತ್ತು ಅಮಾಯಕರಿಗೆ ನ್ಯಾಯ ಒದಗಿಸಬೇ ಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕ<br>ರಣದ ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಉತ್ತರ ನೀಡಲು ನಿರ್ದೇಶನ ನೀಡಿರುವುದನ್ನು ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ (ಎನ್ಎಫ್ಐಡಬ್ಲ್ಯು) ರಾಜ್ಯ ಸಮಿತಿ ಸ್ವಾಗತಿಸಿದೆ.</p><p>ಬಾಲಕಿ ಸೌಜನ್ಯ ಪ್ರಕರಣದ ಮರುತನಿಖೆಗೆ ಕೋರಿ ಆಕೆಯ ತಾಯಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿ ನಿರ್ದೇಶನ ನೀಡಿರುವುದು ಕಗ್ಗತ್ತಲ<br>ಲ್ಲಿರುವ ನಮಗೆ ಕೊಂಚ ಬೆಳಕಿನ ಆಶಾಕಿರಣ ಮೂಡಿಸಿದೆ. ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಉತ್ತರ ನೀಡುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮರುತನಿಖೆಯಿಂದ ಹಿಂದೆ ಸರಿಯಬಾರದು ಹಾಗೂ ಸಾಕ್ಷ್ಯಗಳಿಲ್ಲ ಎಂಬಂತಹ ಸುಳ್ಳು ನೆಪಗಳನ್ನು ನೀಡಬಾರದು ಎಂದು ಎನ್ಎಫ್ಐಡಬ್ಲ್ಯು ಅಧ್ಯಕ್ಷೆ ಎ.ಜ್ಯೋತಿ ತಿಳಿಸಿದ್ದಾರೆ.</p><p>ಎಸ್ಐಟಿ ಎಲ್ಲಾ ರೀತಿಯ ಸಹಕಾರ ನೀಡಿ, ನೊಂದ ಮಹಿಳೆಯರಿಗೆ ಮತ್ತು ಅಮಾಯಕರಿಗೆ ನ್ಯಾಯ ಒದಗಿಸಬೇ ಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>