ಮೇಳ ಉದ್ಘಾಟಿಸಿದ ದಾವಣಗೆರೆಯ ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಶಿವಕುಮಾರ್, ‘ಚಿಲ್ಲರೆ ವ್ಯಾಪಾರಿಗಳಿಗೆ ಇದು ಅತ್ಯುತ್ತಮ ವೇದಿಕೆಯಾಗಿದ್ದು, ಎಲ್ಲಾ ಉತ್ಪಾದಕರು ಒಂದೆಡೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತಿರುವುದು ಉತ್ತಮ ಬೆಳವಣಿಗೆ. ಬೆಂಗಳೂರು ಇಡೀ ದೇಶದಲ್ಲಿ ಸಂಘಟಿತ ಜವಳಿ ತಾಣವಾಗಿ ಮಾರ್ಪಟ್ಟಿದ್ದು, ಜವಳಿ ವ್ಯಾಪಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ’ ಎಂದರು.