ಶುಕ್ರವಾರ, 19 ಡಿಸೆಂಬರ್ 2025
×
ADVERTISEMENT
ADVERTISEMENT

ಕನ್ನಡದಲ್ಲಿ ರೈಲ್ವೆ ಪರೀಕ್ಷೆ | ಹೋರಾಟಕ್ಕೆ ಸಂದ ಜಯ: ಕರವೇ ಅಧ್ಯಕ್ಷ ನಾರಾಯಣಗೌಡ

Published : 19 ಡಿಸೆಂಬರ್ 2025, 14:11 IST
Last Updated : 19 ಡಿಸೆಂಬರ್ 2025, 14:11 IST
ಫಾಲೋ ಮಾಡಿ
Comments
ಶಿಸ್ತು ಕ್ರಮ ಕೈಗೊಳ್ಳಿ: ಬಿಳಿಮಲೆ
ಕನ್ನಡವನ್ನು ಕಡೆಗಣಿಸಿರುವ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ  ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ. ‘ಕನ್ನಡದಲ್ಲಿ ಬರೆಯುವ ಅವಕಾಶವನ್ನು ನಿರಾಕರಿಸುವ ಮೂಲಕ ಕನ್ನಡಿಗರ ಭಾವನೆಗಳಿಗೆ ತೀವ್ರ ಘಾಸಿಯನ್ನು ಉಂಟು ಮಾಡಿದ್ದಾರೆ. ಹುಬ್ಬಳ್ಳಿ ಮೈಸೂರು ವಿಭಾಗದಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಬಹುದಾದರೆ ಬೆಂಗಳೂರು ವಿಭಾಗದಲ್ಲಿ ಯಾಕೆ ಸಾಧ್ಯವಾಗಿಲ್ಲ ಎಂಬುದರ ಬಗ್ಗೆಯೂ ತನಿಖೆ ಮಾಡಬೇಕು. 15 ದಿನಗಳ ಹಿಂದೆ ಕನ್ನಡಕ್ಕೆ ಅವಕಾಶ ನೀಡದೇ ನಡೆಸಿದ್ದ ಪರೀಕ್ಷೆಯನ್ನು ರದ್ದು ಮಾಡಬೇಕು. ಕನ್ನಡ ಭಾಷೆಗೆ ಅವಕಾಶ ನೀಡಿ ಮರು ಪರೀಕ್ಷೆ ನಡೆಸುವ ಮೂಲಕ ಕನ್ನಡಿಗರಿಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT