<p><strong>ಬೆಂಗಳೂರು</strong>: ‘ದೇಶದಲ್ಲಿ ನೆಲ, ಜಲ ಎಲ್ಲವೂ ಕಲುಷಿತವಾದಂತೆ ಜನರ ಮನಸ್ಸಿನಲ್ಲೂ ವಿಷಕಾರಿ ಚಿಂತನೆ ಬಿತ್ತಲಾಗುತ್ತಿದೆ’ ಎಂದು ಲೇಖಕಿ ಡಾ.ಕೆ.ಶರೀಫಾ ಕಳವಳ ವ್ಯಕ್ತಪಡಿಸಿದರು.</p>.<p>ಭೀಮ್ ಆರ್ಮಿ ಬೆಂಗಳೂರು ನಗರ ಜಿಲ್ಲಾ ಸಮಿತಿಯು ಸಾವಿತ್ರಿಬಾಯಿ ಫುಲೆ ಅವರ 192ನೇ ಜನ್ಮದಿನಾಚರಣೆ ಹಾಗೂ ಮಹಿಳೆಯರ ಹಕ್ಕುಗಳ ಕುರಿತು ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಮಾನವೀಯ ವಿಚಾರ ಹಾಗೂ ಮಹಿಳಾ ಹಕ್ಕುಗಳ ಕುರಿತು ಸಾವಿತ್ರಿಬಾಯಿ ಫುಲೆ ಮೊದಲು<br />ಧ್ವನಿಯೆತ್ತಿದ್ದರು. ರಾಜರ ಆಳ್ವಿಕೆಯ ಕಾಲದಲ್ಲಿಯೇ ಫುಲೆ ಅವರು ಸ್ವದೇಶಿ ಕಲ್ಪನೆಯ ಬಗ್ಗೆ ಮಾತನಾಡಿದ್ದರು. ಇಂದು ವಿದ್ಯಾರ್ಥಿನಿಯರು ಆತ್ಮಸ್ಥೈರ್ಯದಿಂದ ಶಿಕ್ಷಣ ಪಡೆಯುತ್ತಿದ್ದಾರೆ ಎಂದರೆ ಅವರ ಹೋರಾಟವೇ ಕಾರಣ’ ಎಂದು ಪ್ರತಿಪಾದಿಸಿದರು.</p>.<p>ವೈದ್ಯೆ ಸರೋಜಾ ಮಾತನಾಡಿ, ‘ಫುಲೆ ಅವರು ಹೊತ್ತಿಸಿದ ಕಿಡಿ ಇಂದು ಅಕ್ಷರದ ಕ್ರಾಂತಿಯಾಗುತ್ತಿದೆ. ಶಿಕ್ಷಕರದ್ದು ಬರೀ ವೃತ್ತಿಯಲ್ಲ. ಅದು ಸಮಾಜದಲ್ಲಿ ಬದಲಾವಣೆ ತರುವ ಕಾಯಕ ಎಂದು ತೋರಿಸಿಕೊಟ್ಟವರು’ ಎಂದು ಹೇಳಿದರು.</p>.<p>ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಎಂ.ಎಸ್.ಆಶಾದೇವಿ ಮಾತನಾಡಿ, ‘ವಿಚಾರಗಳನ್ನು ಮರೆಯುತ್ತಿದ್ದೇವೆ. ಮೌಲ್ಯಗಳು ಕಣ್ಮರೆಯಾಗುತ್ತಿವೆ. ಈ ಸೋಲಿನ ಹೊಣೆಗಾರರು ನಾವೇ. ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಕ್ತಿ ತೋರಿಸಿಕೊಟ್ಟಿದ್ದಾರೆ. ನಮ್ಮ ಉದ್ಧಾರವನ್ನು ನಾವೇ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದರು.</p>.<p>ಬಹುಮಾಧ್ಯಮ ತಜ್ಞೆ ಶಮಂತಾ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರೊ.ಕಾವಲಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೇಶದಲ್ಲಿ ನೆಲ, ಜಲ ಎಲ್ಲವೂ ಕಲುಷಿತವಾದಂತೆ ಜನರ ಮನಸ್ಸಿನಲ್ಲೂ ವಿಷಕಾರಿ ಚಿಂತನೆ ಬಿತ್ತಲಾಗುತ್ತಿದೆ’ ಎಂದು ಲೇಖಕಿ ಡಾ.ಕೆ.ಶರೀಫಾ ಕಳವಳ ವ್ಯಕ್ತಪಡಿಸಿದರು.</p>.<p>ಭೀಮ್ ಆರ್ಮಿ ಬೆಂಗಳೂರು ನಗರ ಜಿಲ್ಲಾ ಸಮಿತಿಯು ಸಾವಿತ್ರಿಬಾಯಿ ಫುಲೆ ಅವರ 192ನೇ ಜನ್ಮದಿನಾಚರಣೆ ಹಾಗೂ ಮಹಿಳೆಯರ ಹಕ್ಕುಗಳ ಕುರಿತು ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಮಾನವೀಯ ವಿಚಾರ ಹಾಗೂ ಮಹಿಳಾ ಹಕ್ಕುಗಳ ಕುರಿತು ಸಾವಿತ್ರಿಬಾಯಿ ಫುಲೆ ಮೊದಲು<br />ಧ್ವನಿಯೆತ್ತಿದ್ದರು. ರಾಜರ ಆಳ್ವಿಕೆಯ ಕಾಲದಲ್ಲಿಯೇ ಫುಲೆ ಅವರು ಸ್ವದೇಶಿ ಕಲ್ಪನೆಯ ಬಗ್ಗೆ ಮಾತನಾಡಿದ್ದರು. ಇಂದು ವಿದ್ಯಾರ್ಥಿನಿಯರು ಆತ್ಮಸ್ಥೈರ್ಯದಿಂದ ಶಿಕ್ಷಣ ಪಡೆಯುತ್ತಿದ್ದಾರೆ ಎಂದರೆ ಅವರ ಹೋರಾಟವೇ ಕಾರಣ’ ಎಂದು ಪ್ರತಿಪಾದಿಸಿದರು.</p>.<p>ವೈದ್ಯೆ ಸರೋಜಾ ಮಾತನಾಡಿ, ‘ಫುಲೆ ಅವರು ಹೊತ್ತಿಸಿದ ಕಿಡಿ ಇಂದು ಅಕ್ಷರದ ಕ್ರಾಂತಿಯಾಗುತ್ತಿದೆ. ಶಿಕ್ಷಕರದ್ದು ಬರೀ ವೃತ್ತಿಯಲ್ಲ. ಅದು ಸಮಾಜದಲ್ಲಿ ಬದಲಾವಣೆ ತರುವ ಕಾಯಕ ಎಂದು ತೋರಿಸಿಕೊಟ್ಟವರು’ ಎಂದು ಹೇಳಿದರು.</p>.<p>ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಎಂ.ಎಸ್.ಆಶಾದೇವಿ ಮಾತನಾಡಿ, ‘ವಿಚಾರಗಳನ್ನು ಮರೆಯುತ್ತಿದ್ದೇವೆ. ಮೌಲ್ಯಗಳು ಕಣ್ಮರೆಯಾಗುತ್ತಿವೆ. ಈ ಸೋಲಿನ ಹೊಣೆಗಾರರು ನಾವೇ. ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಕ್ತಿ ತೋರಿಸಿಕೊಟ್ಟಿದ್ದಾರೆ. ನಮ್ಮ ಉದ್ಧಾರವನ್ನು ನಾವೇ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದರು.</p>.<p>ಬಹುಮಾಧ್ಯಮ ತಜ್ಞೆ ಶಮಂತಾ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರೊ.ಕಾವಲಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>