ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಸ್ಮಶಾನಕ್ಕೆ ಜಾಗ: ಕ್ರಮಕ್ಕೆ ನಿರ್ದೇಶನ

Last Updated 13 ಜೂನ್ 2022, 20:00 IST
ಅಕ್ಷರ ಗಾತ್ರ

ಬೆಂಗಳೂರು:ಸ್ಮಶಾನಕ್ಕಾಗಿ ಜಾಗ ಮೀಸಲಿರಿಸುವಂತೆ ಕೋರಿಕೆ.ಆರ್‌.ಪುರಂ ಹೋಬಳಿಯ ಚಿನ್ನಪ್ಪನಹಳ್ಳಿ ನಿವಾಸಿಗಳು ಸಲ್ಲಿಸಿರುವ ಮನವಿಯನ್ನು ಮೂರು ತಿಂಗಳ ಒಳಗಾಗಿ ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉತ್ತರ ತಹಶೀಲ್ದಾರ್‌ಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಕುರಿತಂತೆ ಎಲ್‌.ಮಹೇಶ್‌ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಇದೇ 10ರಂದು ವಿಲೇವಾರಿ ಮಾಡಿದೆ.

‘ಈ ಆದೇಶ ಕೈಸೇರಿದ ಮೂರು ತಿಂಗಳ ಒಳಗಾಗಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ತಹಶೀಲ್ದಾರ್‌ ಅಥವಾ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT