<p><strong>ಬೆಂಗಳೂರು</strong>: ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ವಿಲೇವಾರಿಯಾಗದೇ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಏಳು ವಿಶೇಷ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.</p>.<p>ಐಎಎಸ್ ಅಧಿಕಾರಿಗಳಾದ ರಮೇಶ್ ಕೆ.ಎನ್., ಎಚ್.ಎನ್. ಗೋಪಾಲಕೃಷ್ಣ, ಮುಲ್ಲೈ ಮುಗಿಲನ್ ಎಂ.ಪಿ., ಅರುಂಧತಿ ಚಂದ್ರಶೇಖರ್, ಸೆಲ್ವಮಣಿ, ಹೊನ್ನಾಂಬ ಹಾಗೂ ವಿದ್ಯಾಕುಮಾರಿ ಅವರನ್ನು ವಿಶೇಷ ಜಿಲ್ಲಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈಗಾಗಲೇ ವಿಶೇಷ ಜಿಲ್ಲಾಧಿಕಾರಿಗಳಾಗಿರುವ ಎಸ್.ಎನ್. ಬಾಲಚಂದ್ರ ಹಾಗೂ ಅರ್ಚನಾ ಮುಂದುವರಿಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಮೇ 2023ರಲ್ಲಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ 7,460 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 1 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಬಾಕಿ ಇದ್ದ 6393 ಪ್ರಕರಣಗಳಿದ್ದವು. ಅದರಲ್ಲಿ 5 ವರ್ಷಕ್ಕೂ ಮೇಲ್ಪಟ್ಟ 4,894 ಪ್ರಕರಣಗಳಿದ್ದವು. ಎರಡು ವರ್ಷಗಳಲ್ಲಿ 3,729 ಬಾಕಿ ಇದ್ದ ತಕರಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದೇ ಅವಧಿಯಲ್ಲಿ 1,545 ಹೊಸ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ 5276 ಪ್ರಕರಣಗಳು ಬಾಕಿ ಇವೆ’ ಎಂದು ವಿವರ ನೀಡಿದ್ದಾರೆ.</p>.<p>ಪ್ರತಿ ತಿಂಗಳು ಸರಾಸರಿ 143 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಈ ಪ್ರಮಾಣದಲ್ಲಿ ಇತ್ಯರ್ಥ ಮಾಡುತ್ತಾ ಹೋದರೆ ವಿಲೇವಾರಿ ಮಾಡಲು ಹಲವು ವರ್ಷಗಳೇ ಬೇಕಾಗುತ್ತದೆ. ಅದಕ್ಕಾಗಿ ವಿಶೇಷ ಜಿಲ್ಲಾಧಿಕಾರಿಗಳ ಸಂಖ್ಯೆ ಹೆಚ್ಚಿಸಲಾಗಿದೆ. ಪ್ರತಿಯೊಬ್ಬರಿಗೂ 500ರಿಂದ 700 ಪ್ರಕರಣಗಳನ್ನು ನಿಗದಿಗೊಳಿಸಲಾಗಿದೆ. 6 ತಿಂಗಳ ಒಳಗೆ ಎಲ್ಲ ಬಾಕಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ವಿಲೇವಾರಿಯಾಗದೇ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಏಳು ವಿಶೇಷ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.</p>.<p>ಐಎಎಸ್ ಅಧಿಕಾರಿಗಳಾದ ರಮೇಶ್ ಕೆ.ಎನ್., ಎಚ್.ಎನ್. ಗೋಪಾಲಕೃಷ್ಣ, ಮುಲ್ಲೈ ಮುಗಿಲನ್ ಎಂ.ಪಿ., ಅರುಂಧತಿ ಚಂದ್ರಶೇಖರ್, ಸೆಲ್ವಮಣಿ, ಹೊನ್ನಾಂಬ ಹಾಗೂ ವಿದ್ಯಾಕುಮಾರಿ ಅವರನ್ನು ವಿಶೇಷ ಜಿಲ್ಲಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈಗಾಗಲೇ ವಿಶೇಷ ಜಿಲ್ಲಾಧಿಕಾರಿಗಳಾಗಿರುವ ಎಸ್.ಎನ್. ಬಾಲಚಂದ್ರ ಹಾಗೂ ಅರ್ಚನಾ ಮುಂದುವರಿಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಮೇ 2023ರಲ್ಲಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ 7,460 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 1 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಬಾಕಿ ಇದ್ದ 6393 ಪ್ರಕರಣಗಳಿದ್ದವು. ಅದರಲ್ಲಿ 5 ವರ್ಷಕ್ಕೂ ಮೇಲ್ಪಟ್ಟ 4,894 ಪ್ರಕರಣಗಳಿದ್ದವು. ಎರಡು ವರ್ಷಗಳಲ್ಲಿ 3,729 ಬಾಕಿ ಇದ್ದ ತಕರಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದೇ ಅವಧಿಯಲ್ಲಿ 1,545 ಹೊಸ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ 5276 ಪ್ರಕರಣಗಳು ಬಾಕಿ ಇವೆ’ ಎಂದು ವಿವರ ನೀಡಿದ್ದಾರೆ.</p>.<p>ಪ್ರತಿ ತಿಂಗಳು ಸರಾಸರಿ 143 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಈ ಪ್ರಮಾಣದಲ್ಲಿ ಇತ್ಯರ್ಥ ಮಾಡುತ್ತಾ ಹೋದರೆ ವಿಲೇವಾರಿ ಮಾಡಲು ಹಲವು ವರ್ಷಗಳೇ ಬೇಕಾಗುತ್ತದೆ. ಅದಕ್ಕಾಗಿ ವಿಶೇಷ ಜಿಲ್ಲಾಧಿಕಾರಿಗಳ ಸಂಖ್ಯೆ ಹೆಚ್ಚಿಸಲಾಗಿದೆ. ಪ್ರತಿಯೊಬ್ಬರಿಗೂ 500ರಿಂದ 700 ಪ್ರಕರಣಗಳನ್ನು ನಿಗದಿಗೊಳಿಸಲಾಗಿದೆ. 6 ತಿಂಗಳ ಒಳಗೆ ಎಲ್ಲ ಬಾಕಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>