<p><strong>ಬೆಂಗಳೂರು:</strong> ಇದುವರೆಗೆ ಕೋವಿಡ್ ಲಸಿಕೆಯ ಒಂದು ಡೋಸನ್ನೂ ಪಡೆಯದವರನ್ನು ಪತ್ತೆ ಹಚ್ಚಿ ಲಸಿಕೆ ಹಾಕಿಸಲು ಬಿಬಿಎಂಪಿಯು ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಮೇಳದಲ್ಲಿ ಒಟ್ಟು 80 ಸಾವಿರ ಮಂದಿಗೆ ಲಸಿಕೆ ನೀಡಲಾಗಿದೆ.</p>.<p>ಬಿಬಿಎಂಪಿಯು 4.80 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಿತ್ತು. ಆದರೆ, ಕೋವಿಡ್ ಲಸಿಕೆ ಪಡೆಯುವ ಅರ್ಹತೆ ಹೊಂದಿದವರಲ್ಲಿ ಈಗಾಗಲೇ ಶೇ 86ರಷ್ಟು ಮಂದಿ ಮೊದಲ ಡೋಸ್ ಹಾಗೂ ಶೇ 52ರಷ್ಟು ಮಂದಿ ಎರಡನೇ ಡೋಸ್ ಪಡೆದಿದ್ದರು. ಹಾಗಾಗಿ ವಿಶೇಷ ಮೇಳದಲ್ಲಿ ಲಸಿಕೆ ಪಡೆದವರ ಸಂಖ್ಯೆ 80ಸಾವಿರಕ್ಕೆ ಸೀಮಿತವಾಗಿದೆ ಎಂದು ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ವಿಭಾಗದ ಮೂಲಗಳು ತಿಳಿಸಿವೆ.</p>.<p>‘ಅರ್ಹತೆ ಹೊಂದಿರುವ ಎಲ್ಲರಿಗೂ ಲಸಿಕೆ ಲಭ್ಯವಾಗಬೇಕು ಎಂಬ ಕಾರಣಕ್ಕೆ ವಿಶೇಷ ಮೇಳ ಹಮ್ಮಿಕೊಳ್ಳಲಾಗಿತ್ತು ನಗರದಾದ್ಯಂತ ಅಲ್ಲಲ್ಲಿ ಲಸಿಕೆ ಕೇಂದ್ರಗಳನ್ನು ಹಾಗೂ ಸಂಚಾರ ಶಿಬಿರಗಳನ್ನು ಆಯೋಜಿಸಲಾಗಿತ್ತು. ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲು ಮನೆ ಮನೆಗೆ ತೆರಳಿ ಅಭಿಯಾನ ನಡೆಸಲಾಗುತ್ತಿದೆ. ಲಸಿಕೆ ಕಾರ್ಯಕ್ರಮ ಮುಂದುವರಿಯಲಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಸಾರ್ವಜನಿಕ ಆರೋಗ್ಯ) ಕೆ.ವಿ.ತ್ರಿಲೋಕಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇದುವರೆಗೆ ಕೋವಿಡ್ ಲಸಿಕೆಯ ಒಂದು ಡೋಸನ್ನೂ ಪಡೆಯದವರನ್ನು ಪತ್ತೆ ಹಚ್ಚಿ ಲಸಿಕೆ ಹಾಕಿಸಲು ಬಿಬಿಎಂಪಿಯು ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಮೇಳದಲ್ಲಿ ಒಟ್ಟು 80 ಸಾವಿರ ಮಂದಿಗೆ ಲಸಿಕೆ ನೀಡಲಾಗಿದೆ.</p>.<p>ಬಿಬಿಎಂಪಿಯು 4.80 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಿತ್ತು. ಆದರೆ, ಕೋವಿಡ್ ಲಸಿಕೆ ಪಡೆಯುವ ಅರ್ಹತೆ ಹೊಂದಿದವರಲ್ಲಿ ಈಗಾಗಲೇ ಶೇ 86ರಷ್ಟು ಮಂದಿ ಮೊದಲ ಡೋಸ್ ಹಾಗೂ ಶೇ 52ರಷ್ಟು ಮಂದಿ ಎರಡನೇ ಡೋಸ್ ಪಡೆದಿದ್ದರು. ಹಾಗಾಗಿ ವಿಶೇಷ ಮೇಳದಲ್ಲಿ ಲಸಿಕೆ ಪಡೆದವರ ಸಂಖ್ಯೆ 80ಸಾವಿರಕ್ಕೆ ಸೀಮಿತವಾಗಿದೆ ಎಂದು ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ವಿಭಾಗದ ಮೂಲಗಳು ತಿಳಿಸಿವೆ.</p>.<p>‘ಅರ್ಹತೆ ಹೊಂದಿರುವ ಎಲ್ಲರಿಗೂ ಲಸಿಕೆ ಲಭ್ಯವಾಗಬೇಕು ಎಂಬ ಕಾರಣಕ್ಕೆ ವಿಶೇಷ ಮೇಳ ಹಮ್ಮಿಕೊಳ್ಳಲಾಗಿತ್ತು ನಗರದಾದ್ಯಂತ ಅಲ್ಲಲ್ಲಿ ಲಸಿಕೆ ಕೇಂದ್ರಗಳನ್ನು ಹಾಗೂ ಸಂಚಾರ ಶಿಬಿರಗಳನ್ನು ಆಯೋಜಿಸಲಾಗಿತ್ತು. ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲು ಮನೆ ಮನೆಗೆ ತೆರಳಿ ಅಭಿಯಾನ ನಡೆಸಲಾಗುತ್ತಿದೆ. ಲಸಿಕೆ ಕಾರ್ಯಕ್ರಮ ಮುಂದುವರಿಯಲಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಸಾರ್ವಜನಿಕ ಆರೋಗ್ಯ) ಕೆ.ವಿ.ತ್ರಿಲೋಕಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>