ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ, ಬಿಬಿಎಂಪಿ ರೆಫರಲ್ ಆಸ್ಪತ್ರೆ ಕಟ್ಟಡ, ಬಿಬಿಎಂಪಿ ಪ್ರೌಢಶಾಲೆ ಹಾಗೂ ಕಾಲೇಜು ಕಟ್ಟಡ, ಕರ್ನಾಟಕ ಪಬ್ಲಿಕ್ ಶಾಲೆ, ನವ ನಂದಿನಿ ಉದ್ಯಾನ ಹಾಗೂ ರಾಣಿ ಅಬ್ಬಕ್ಕ ಆಟದ ಮೈದಾನವನ್ನು ಬೊಮ್ಮಾಯಿ ಉದ್ಘಾಟಿಸಿದರು. ಅಬಕಾರಿ ಇಲಾಖೆ ಸಚಿವ ಗೋಪಾಲಯ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ.ಸುಧಾಕರ್, ವಿಧಾನಪರಿಷತ್ ಸದಸ್ಯ ಅ.ದೇವೇಗೌಡ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದ್ದರು.