<p><strong>ಬೆಂಗಳೂರು</strong>: ಬೇಸಿಗೆ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆಗೊಳಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಗರ ನಡುವೆ ವಾರಕ್ಕೆ ಮೂರು ಬಾರಿಯಂತೆ (ಟ್ರೈ-ವೀಕ್ಲಿ) ಒಂದು ತಿಂಗಳು ಬೇಸಿಗೆ ವಿಶೇಷ ರೈಲು ಸಂಚರಿಸಲಿದೆ. ಮೇ 27ಕ್ಕೆ ಮೊದಲ ರೈಲು ಹೊರಡಲಿದೆ.</p>.<p>ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ (ಎಸ್ಎಂವಿಟಿ) ಪ್ರತಿ ಸೋಮವಾರ, ಬುಧವಾರ ಮತ್ತು ಗುರುವಾರ ರಾತ್ರಿ 11.50ಕ್ಕೆ ವಿಶೇಷ ರೈಲು ಹೊರಡಲಿದ್ದು, ಸತ್ಯಸಾಯಿ ಪ್ರಶಾಂತಿ ನಿಲಯಂ ಮಾರ್ಗದ ಮೂಲಕ ಮರುದಿನ ಮಧ್ಯಾಹ್ನ 12.30ಕ್ಕೆ ಕಲಬುರಗಿ ನಿಲ್ದಾಣವನ್ನು ತಲುಪಲಿದೆ.</p>.<p>ಕಲಬುರಗಿ ನಿಲ್ದಾಣದಿಂದ ಪ್ರತಿ ಮಂಗಳವಾರ, ಗುರುವಾರ ಮತ್ತು ಶುಕ್ರವಾರ ಸಂಜೆ 4.50ಕ್ಕೆ ಹೊರಟು ನಾಗಸಮುದ್ರ ಮಾರ್ಗದ ಮೂಲಕ ಮರುದಿನ ಬೆಳಿಗ್ಗೆ 4.45ಕ್ಕೆ ಬೆಂಗಳೂರು ಎಸ್ಎಂವಿಟಿಗೆ ತಲುಪಲಿದೆ.</p>.<p>ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ಈ ರೈಲುಗಳು ನಿಲುಗಡೆ ಹೊಂದಿವೆ.</p>.<p>ಮುಂಗಡ ಕಾಯ್ದಿರಿಸಲು, ವೇಳಾಪಟ್ಟಿ ಇನ್ನಿತರ ಮಾಹಿತಿಗಾಗಿ ಪ್ರಯಾಣಿಕರು www.enquiry.indianrail.gov.in ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ ಸಹಾಯವಾಣಿ (139) ಸಂಪರ್ಕಿಸಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೇಸಿಗೆ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆಗೊಳಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಗರ ನಡುವೆ ವಾರಕ್ಕೆ ಮೂರು ಬಾರಿಯಂತೆ (ಟ್ರೈ-ವೀಕ್ಲಿ) ಒಂದು ತಿಂಗಳು ಬೇಸಿಗೆ ವಿಶೇಷ ರೈಲು ಸಂಚರಿಸಲಿದೆ. ಮೇ 27ಕ್ಕೆ ಮೊದಲ ರೈಲು ಹೊರಡಲಿದೆ.</p>.<p>ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ (ಎಸ್ಎಂವಿಟಿ) ಪ್ರತಿ ಸೋಮವಾರ, ಬುಧವಾರ ಮತ್ತು ಗುರುವಾರ ರಾತ್ರಿ 11.50ಕ್ಕೆ ವಿಶೇಷ ರೈಲು ಹೊರಡಲಿದ್ದು, ಸತ್ಯಸಾಯಿ ಪ್ರಶಾಂತಿ ನಿಲಯಂ ಮಾರ್ಗದ ಮೂಲಕ ಮರುದಿನ ಮಧ್ಯಾಹ್ನ 12.30ಕ್ಕೆ ಕಲಬುರಗಿ ನಿಲ್ದಾಣವನ್ನು ತಲುಪಲಿದೆ.</p>.<p>ಕಲಬುರಗಿ ನಿಲ್ದಾಣದಿಂದ ಪ್ರತಿ ಮಂಗಳವಾರ, ಗುರುವಾರ ಮತ್ತು ಶುಕ್ರವಾರ ಸಂಜೆ 4.50ಕ್ಕೆ ಹೊರಟು ನಾಗಸಮುದ್ರ ಮಾರ್ಗದ ಮೂಲಕ ಮರುದಿನ ಬೆಳಿಗ್ಗೆ 4.45ಕ್ಕೆ ಬೆಂಗಳೂರು ಎಸ್ಎಂವಿಟಿಗೆ ತಲುಪಲಿದೆ.</p>.<p>ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ಈ ರೈಲುಗಳು ನಿಲುಗಡೆ ಹೊಂದಿವೆ.</p>.<p>ಮುಂಗಡ ಕಾಯ್ದಿರಿಸಲು, ವೇಳಾಪಟ್ಟಿ ಇನ್ನಿತರ ಮಾಹಿತಿಗಾಗಿ ಪ್ರಯಾಣಿಕರು www.enquiry.indianrail.gov.in ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ ಸಹಾಯವಾಣಿ (139) ಸಂಪರ್ಕಿಸಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>