’ಸುಬ್ರಹ್ಮಣ್ಯನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಬಾಲಕಿ, 2021ರ ಅಕ್ಟೋಬರ್ 31ರಂದು ಮನೆಯಿಂದ ನಾಪತ್ತೆಯಾಗಿದ್ದಳು. ಈ ಬಗ್ಗೆ ಠಾಣೆಗೆ ದೂರು ನೀಡಿದ್ದ ಪೋಷಕರು, ’ಆಧ್ಯಾತ್ಮಿಕ ಪ್ರಭಾವಕ್ಕೆ ಒಳಗಾಗಿದ್ದ ಮಗಳು, ಆತ್ಮಗಳ ಜೊತೆ ಮಾತುಕತೆ ನಡೆಸುವುದಾಗಿ ಹೇಳುತ್ತಿದ್ದಳು. ಅದೇ ಕಾರಣಕ್ಕೆ ಆಕೆ ಮನೆ ಬಿಟ್ಟು ಹೋಗಿದ್ದು, ಹುಡುಕಿಕೊಡಿ‘ ಎಂದು ಕೋರಿದ್ದರು‘ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.