‘ದಲಿತ ಸಮುದಾಯದ ಶೇ 34ರಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇಂದಿಗೂ ನಾವು ಮೇಲ್ವರ್ಗದವರ ಕೈಗೊಂಬೆಗಳಾಗಿ ಕೆಲಸ ಮಾಡುತ್ತಿದ್ದೇವೆ. ದಲಿತ ಪರ ದನಿ ಎತ್ತುವ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ತಳ ಸಮುದಾಯದ ಅಧಿಕಾರಿಗಳನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಅವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ಇದು ಆತಂಕಕಾರಿ’ ಎಂದರು.