<p><strong>ಬೆಂಗಳೂರು:</strong> ‘ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.</p>.<p>ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಗರದ ಯವನಿಕಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ ನೇರ ನಗದು ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಚಿನ್ನದ ಪದಕ ವಿಜೇತರಿಗೆ ₹ 7 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ ₹ 5 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹ 3 ಲಕ್ಷಕ್ಕೆ ಹೆಚ್ಚಿಸಿದ್ದೇವೆ’ ಎಂದು ಅವರು ವಿವರಿಸಿದರು.</p>.<p>‘2015ರಲ್ಲಿ ನಾನೇ ಮುಖ್ಯಮಂತ್ರಿ ಆಗಿದ್ದಾಗ ಬಹುಮಾನದ ಮೊತ್ತವನ್ನು ಚಿನ್ನ, ಬೆಳ್ಳಿ, ಕಂಚಿನ ಪದಕದವರಿಗೆ ಕ್ರಮವಾಗಿ ₹ 5, ₹3 ಹಾಗೂ ₹2 ಲಕ್ಷಕ್ಕೆ ಏರಿಸಿದ್ದೆ. ದಶಕದ ನಂತರ ನಗದು ಬಹುಮಾನದ ಮೊತ್ತ ಹೆಚ್ಚಿಸಿ ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>ಕರ್ನಾಟಕದ ಕ್ರೀಡಾಪಟುಗಳು ಒಲಿಂಪಿಕ್ಸ್, ಕಾಮನ್ವೆಲ್ತ್ ಹಾಗೂ ಏಷಿಯನ್ ಗೇಮ್ಸ್ನಲ್ಲಿ ಹೆಚ್ಚು ಪದಕ ಪಡೆಯಲು ಪೂರಕ ಪ್ರೋತ್ಸಾಹವನ್ನು ಸರ್ಕಾರ ನೀಡುತ್ತಿದೆ. ತರಬೇತಿಗೆ ನೆರವು ನೀಡಲಾಗುತ್ತಿದೆ. ಉದ್ಯೋಗದಲ್ಲೂ ಅವಕಾಶ ಮಾಡಿಕೊಡಲಾಗಿದೆ ಎಂದರು.</p>.<p>ಉತ್ತರಾಖಂಡದಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕ ಪಡೆದವರ ಜತೆಗೆ ಇತರೆ ಕೂಟಗಳಲ್ಲಿ ಪದಕ ಗೆದ್ದ 124 ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲಾಯಿತು.</p>.<p>ಕ್ರೀಡಾಪಟುಗಳಾದ ಸುನೀಲ್, ಮೊಹಮ್ಮದ್ ರಹೀಲ್, ಅಶ್ವಿನಿ ಭಟ್, ಶ್ರೇಯಾ, ಶಿಖಾ ಗೌತಮ್, ಜ್ಯೋತಿಕಾ, ಉನ್ನತಿ ಅಯ್ಯಪ್ಪ, ಪ್ರಜ್ವಲ್ದೇವ್, ಜೋನಾಥನ್ ಅವರು ಸಾಂಕೇತಿಕವಾಗಿ ಗೌರವ ಸ್ವೀಕರಿಸಿದರು. ಶಾಸಕ ರಿಜ್ವಾನ್ ಅರ್ಷದ್, ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಯುಕ್ತ ಆರ್.ಚೇತನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.</p>.<p>ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಗರದ ಯವನಿಕಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ ನೇರ ನಗದು ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಚಿನ್ನದ ಪದಕ ವಿಜೇತರಿಗೆ ₹ 7 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ ₹ 5 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹ 3 ಲಕ್ಷಕ್ಕೆ ಹೆಚ್ಚಿಸಿದ್ದೇವೆ’ ಎಂದು ಅವರು ವಿವರಿಸಿದರು.</p>.<p>‘2015ರಲ್ಲಿ ನಾನೇ ಮುಖ್ಯಮಂತ್ರಿ ಆಗಿದ್ದಾಗ ಬಹುಮಾನದ ಮೊತ್ತವನ್ನು ಚಿನ್ನ, ಬೆಳ್ಳಿ, ಕಂಚಿನ ಪದಕದವರಿಗೆ ಕ್ರಮವಾಗಿ ₹ 5, ₹3 ಹಾಗೂ ₹2 ಲಕ್ಷಕ್ಕೆ ಏರಿಸಿದ್ದೆ. ದಶಕದ ನಂತರ ನಗದು ಬಹುಮಾನದ ಮೊತ್ತ ಹೆಚ್ಚಿಸಿ ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>ಕರ್ನಾಟಕದ ಕ್ರೀಡಾಪಟುಗಳು ಒಲಿಂಪಿಕ್ಸ್, ಕಾಮನ್ವೆಲ್ತ್ ಹಾಗೂ ಏಷಿಯನ್ ಗೇಮ್ಸ್ನಲ್ಲಿ ಹೆಚ್ಚು ಪದಕ ಪಡೆಯಲು ಪೂರಕ ಪ್ರೋತ್ಸಾಹವನ್ನು ಸರ್ಕಾರ ನೀಡುತ್ತಿದೆ. ತರಬೇತಿಗೆ ನೆರವು ನೀಡಲಾಗುತ್ತಿದೆ. ಉದ್ಯೋಗದಲ್ಲೂ ಅವಕಾಶ ಮಾಡಿಕೊಡಲಾಗಿದೆ ಎಂದರು.</p>.<p>ಉತ್ತರಾಖಂಡದಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕ ಪಡೆದವರ ಜತೆಗೆ ಇತರೆ ಕೂಟಗಳಲ್ಲಿ ಪದಕ ಗೆದ್ದ 124 ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲಾಯಿತು.</p>.<p>ಕ್ರೀಡಾಪಟುಗಳಾದ ಸುನೀಲ್, ಮೊಹಮ್ಮದ್ ರಹೀಲ್, ಅಶ್ವಿನಿ ಭಟ್, ಶ್ರೇಯಾ, ಶಿಖಾ ಗೌತಮ್, ಜ್ಯೋತಿಕಾ, ಉನ್ನತಿ ಅಯ್ಯಪ್ಪ, ಪ್ರಜ್ವಲ್ದೇವ್, ಜೋನಾಥನ್ ಅವರು ಸಾಂಕೇತಿಕವಾಗಿ ಗೌರವ ಸ್ವೀಕರಿಸಿದರು. ಶಾಸಕ ರಿಜ್ವಾನ್ ಅರ್ಷದ್, ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಯುಕ್ತ ಆರ್.ಚೇತನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>