ಬೆಂಗಳೂರು: ‘ಕ್ರೀಡಾಸಕ್ತಿಯಿಂದ ದೈಹಿಕವಾಗಿ ಸದೃಢರಾಗಬಹುದು. ಇದರಿಂದ ಮಾನಸಿಕ ಸ್ವಾಸ್ಥ್ಯಕೂಡ ಹೆಚ್ಚುತ್ತದೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಹೇಳಿದರು.
ಬೆಂಗಳೂರು ವಿ.ವಿಯಲ್ಲಿ ಆಯೋಜಿಸಿದ್ದ ಅಂತರವಿಭಾಗೀಯ ಮಟ್ಟದ ಕ್ರೀಡಾಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ವಿಭಾಗದ ವಿದ್ಯಾರ್ಥಿಗಳು ಶ್ರೇಷ್ಠ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡರು. ಶ್ರೇಷ್ಠ ಕ್ರೀಡಾಪಟು ಪ್ರಶಸ್ತಿಯನ್ನು ಇತಿಹಾಸ ವಿಭಾಗದ ಸುರೇಶ್ ಗೆದ್ದುಕೊಂಡರು.