‘ಕೊಲೆ ಸಂಚಿನ ಬಗ್ಗೆ ಶಾಸಕ ವಿಶ್ವನಾಥ್ ದೂರು ನೀಡಿದ್ದರು. ಇದರನ್ವಯ ದಾಖಲಾಗಿದ್ದ ಎಫ್ಐಆರ್ ಪ್ರಶ್ನಿಸಿ ಆರೋಪಿಗಳು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಎಫ್ಐಆರ್ ರದ್ದುಪಡಿಸಿತ್ತು. ಈ ಕ್ರಮ ಪ್ರಶ್ನಿಸಿ ವಿಶ್ವನಾಥ್, ಪುನಃ ನ್ಯಾಯಾಲಯಕ್ಕೆ ಖಾಸಗಿ ಮೊಕದ್ದಮೆ ಹೂಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.