ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಎಸ್‌.ಆರ್. ವಿಶ್ವನಾಥ್ ಕೊಲೆ ಸಂಚಿನ ಮರು ತನಿಖೆ: ಆರೋಪಿ ವಶಕ್ಕೆ

Last Updated 5 ಡಿಸೆಂಬರ್ 2022, 21:37 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಆರ್. ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿದ್ದ ಬಗ್ಗೆ 2021ರಲ್ಲಿ ದಾಖಲಾಗಿದ್ದ ಪ್ರಕರಣದ ಮರು ತನಿಖೆ ಕೈಗೊಂಡಿರುವ ರಾಜಾನುಕುಂಟೆ ಪೊಲೀಸರು, ಆರೋಪಿ ಕುಳ್ಳ ದೇವರಾಜ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ.

‘ಕೊಲೆ ಸಂಚಿನ ಬಗ್ಗೆ ಶಾಸಕ ವಿಶ್ವನಾಥ್ ದೂರು ನೀಡಿದ್ದರು. ಇದರನ್ವಯ ದಾಖಲಾಗಿದ್ದ ಎಫ್‌ಐಆರ್ ಪ್ರಶ್ನಿಸಿ ಆರೋಪಿಗಳು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಎಫ್‌ಐಆರ್ ರದ್ದುಪಡಿಸಿತ್ತು. ಈ ಕ್ರಮ ಪ್ರಶ್ನಿಸಿ ವಿಶ್ವನಾಥ್, ಪುನಃ ನ್ಯಾಯಾಲಯಕ್ಕೆ ಖಾಸಗಿ ಮೊಕದ್ದಮೆ ಹೂಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಿಶ್ವನಾಥ್ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ, ಮರು ತನಿಖೆ ನಡೆಸುವಂತೆ ಆದೇಶಿಸಿದೆ. ಅದರನ್ವಯ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT