<p><strong>ಬೆಂಗಳೂರು:</strong> ‘ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಯಾವುದೇ ವ್ಯವಹಾರ ನಡೆಸದಿದ್ದರೂ ₹ 35 ಲಕ್ಷ ಸಾಲಕ್ಕೆ ಬಡ್ಡಿ ಸಹಿತ ₹ 2.12 ಕೋಟಿ ಕಟ್ಟಬೇಕೆಂದು ಬ್ಯಾಂಕ್ ನೋಟಿಸ್ ನೀಡಿದೆ’ ಎಂದು ಹೊಸಕೆರೆಹಳ್ಳಿ ನಿವಾಸಿಚಂಪಕವತಿ ಎಂಬುವವರು ದೂರಿದರು.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೋಟಿಸ್ ನೀಡಿದಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಖಾತೆಯನ್ನು ಹೊಂದಿಲ್ಲ. ಆದರೆ, ಕಳೆದ ಸೆ.3ರಂದು ಬ್ಯಾಂಕ್ ನೋಟಿಸ್ ನೀಡಿದ್ದು, ಬಡ್ಡಿ ಸಹಿತ ಸಾಲವನ್ನು ಮರುಪಾವತಿಸುವಂತೆ ಸೂಚಿಸಿದೆ. ಇದು ಆಘಾತವನ್ನುಂಟು ಮಾಡಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ಗೆ ದೂರು ನೀಡಲಾಗಿದೆ. ಬ್ಯಾಂಕ್ಗೆ ಕೂಡ ಈ ಬಗ್ಗೆ ಸ್ಪಷ್ಟನೆ ಕೇಳಲಾಗಿದೆ. ಆದರೆ, ಉತ್ತರ ಬಂದಿಲ್ಲ’ ಎಂದು ತಿಳಿಸಿದರು.</p>.<p>‘ನೋಟಿಸ್ ಪ್ರತಿಯಲ್ಲಿ 2011ರ ಮಾರ್ಚ್ನಲ್ಲಿ ಸಾಲ ಪಡೆದಿರುವುದಾಗಿ ನಮೂದಿಸಲಾಗಿದೆ. ಖಾತೆ ಹೊಂದಿರದಿದ್ದರೂ ನನ್ನ ಎಲ್ಲ ದಾಖಲೆಗಳು ಬ್ಯಾಂಕ್ ಆಡಳಿತ ಮಂಡಳಿಗೆ ಹೇಗೆ ತಲುಪಿತು ಎನ್ನುವುದು ತಿಳಿಯದಾಗಿದೆ. ಈ ಸಂಬಂಧ ಬ್ಯಾಂಕ್ ಆಡಳಿತ ಮಂಡಳಿಗೆ ವಕೀಲರ ಮೂಲಕ ನೋಟಿಸ್ ನೀಡಿದ್ದೇನೆ. ಇದೇ ರೀತಿ ಹಲವರಿಗೆ ಬ್ಯಾಂಕ್ನಿಂದ ನೋಟಿಸ್ ಹೋಗಿರುವ ಸಾಧ್ಯತೆಯಿದೆ. ಈ ಪ್ರಕರಣ ಸಂಪೂರ್ಣ ತನಿಖೆಯಾದಲ್ಲಿ ಸತ್ಯಾಂಶ ತಿಳಿಯಲಿದೆ.’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಯಾವುದೇ ವ್ಯವಹಾರ ನಡೆಸದಿದ್ದರೂ ₹ 35 ಲಕ್ಷ ಸಾಲಕ್ಕೆ ಬಡ್ಡಿ ಸಹಿತ ₹ 2.12 ಕೋಟಿ ಕಟ್ಟಬೇಕೆಂದು ಬ್ಯಾಂಕ್ ನೋಟಿಸ್ ನೀಡಿದೆ’ ಎಂದು ಹೊಸಕೆರೆಹಳ್ಳಿ ನಿವಾಸಿಚಂಪಕವತಿ ಎಂಬುವವರು ದೂರಿದರು.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೋಟಿಸ್ ನೀಡಿದಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಖಾತೆಯನ್ನು ಹೊಂದಿಲ್ಲ. ಆದರೆ, ಕಳೆದ ಸೆ.3ರಂದು ಬ್ಯಾಂಕ್ ನೋಟಿಸ್ ನೀಡಿದ್ದು, ಬಡ್ಡಿ ಸಹಿತ ಸಾಲವನ್ನು ಮರುಪಾವತಿಸುವಂತೆ ಸೂಚಿಸಿದೆ. ಇದು ಆಘಾತವನ್ನುಂಟು ಮಾಡಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ಗೆ ದೂರು ನೀಡಲಾಗಿದೆ. ಬ್ಯಾಂಕ್ಗೆ ಕೂಡ ಈ ಬಗ್ಗೆ ಸ್ಪಷ್ಟನೆ ಕೇಳಲಾಗಿದೆ. ಆದರೆ, ಉತ್ತರ ಬಂದಿಲ್ಲ’ ಎಂದು ತಿಳಿಸಿದರು.</p>.<p>‘ನೋಟಿಸ್ ಪ್ರತಿಯಲ್ಲಿ 2011ರ ಮಾರ್ಚ್ನಲ್ಲಿ ಸಾಲ ಪಡೆದಿರುವುದಾಗಿ ನಮೂದಿಸಲಾಗಿದೆ. ಖಾತೆ ಹೊಂದಿರದಿದ್ದರೂ ನನ್ನ ಎಲ್ಲ ದಾಖಲೆಗಳು ಬ್ಯಾಂಕ್ ಆಡಳಿತ ಮಂಡಳಿಗೆ ಹೇಗೆ ತಲುಪಿತು ಎನ್ನುವುದು ತಿಳಿಯದಾಗಿದೆ. ಈ ಸಂಬಂಧ ಬ್ಯಾಂಕ್ ಆಡಳಿತ ಮಂಡಳಿಗೆ ವಕೀಲರ ಮೂಲಕ ನೋಟಿಸ್ ನೀಡಿದ್ದೇನೆ. ಇದೇ ರೀತಿ ಹಲವರಿಗೆ ಬ್ಯಾಂಕ್ನಿಂದ ನೋಟಿಸ್ ಹೋಗಿರುವ ಸಾಧ್ಯತೆಯಿದೆ. ಈ ಪ್ರಕರಣ ಸಂಪೂರ್ಣ ತನಿಖೆಯಾದಲ್ಲಿ ಸತ್ಯಾಂಶ ತಿಳಿಯಲಿದೆ.’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>