ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೋಟಿಸ್ ನೀಡಿದಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಖಾತೆಯನ್ನು ಹೊಂದಿಲ್ಲ. ಆದರೆ, ಕಳೆದ ಸೆ.3ರಂದು ಬ್ಯಾಂಕ್ ನೋಟಿಸ್ ನೀಡಿದ್ದು, ಬಡ್ಡಿ ಸಹಿತ ಸಾಲವನ್ನು ಮರುಪಾವತಿಸುವಂತೆ ಸೂಚಿಸಿದೆ. ಇದು ಆಘಾತವನ್ನುಂಟು ಮಾಡಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ಗೆ ದೂರು ನೀಡಲಾಗಿದೆ. ಬ್ಯಾಂಕ್ಗೆ ಕೂಡ ಈ ಬಗ್ಗೆ ಸ್ಪಷ್ಟನೆ ಕೇಳಲಾಗಿದೆ. ಆದರೆ, ಉತ್ತರ ಬಂದಿಲ್ಲ’ ಎಂದು ತಿಳಿಸಿದರು.