‘ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರಗಳನ್ನು ತಡೆಯಲು ವಿಫಲವಾಗಿರುವ ಸರ್ಕಾರ, ಹುಸಿ ರಾಷ್ಟ್ರೀಯತೆ, ಉಗ್ರ ರಾಷ್ಟ್ರೀಯವಾದ ಮತ್ತು ಕೋಮು ಭಾವನೆ ಹರಡುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ. ಸರ್ಕಾರದ ನೀತಿಗಳನ್ನು ವಿರೋಧಿಸುವವರು, ವಿಮರ್ಶಿಸುವವರನ್ನು ವಿನಾಕಾರಣ ಜೈಲಿಗೆ ದೂಡುವ ಮೂಲಕ ಸಂವಿಧಾನದತ್ತ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.