<p><strong>ಬೆಂಗಳೂರು:</strong> ‘ಜಿಬಿಎ ಕೇಂದ್ರೀಕೃತ ಆಡಳಿತ ಪದ್ಧತಿಯನ್ನು ಬೆಂಗಳೂರು ನವನಿರ್ಮಾಣ ಪಕ್ಷ(ಬಿಎನ್ಪಿ) ಖಂಡಿಸುತ್ತದೆ. ನಗರದ ಸುಸ್ಥಿರ ಅಭಿವೃದ್ಧಿಗೆ ‘ಏರಿಯಾ ಸಭಾ’ಗಳೇ ಅತ್ಯಂತ ಪರಿಣಾಮಕಾರಿ ಚೌಕಟ್ಟು’ ಎಂದು ಪಕ್ಷದ ಸಂಸ್ಥಾಪಕ ಶ್ರೀಕಾಂತ್ ನರಸಿಂಹನ್ ಶುಕ್ರವಾರ ಅಭಿಪ್ರಾಯಪಟ್ಟರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಡಳಿತದಲ್ಲಿ ವಿಕೇಂದ್ರೀಕರಣ ತರುವ ಮೂಲಕ ಬೆಂಗಳೂರು ನಗರವನ್ನು ಅಭಿವೃದ್ಧಿ ಪಥದೆಡೆಗೆ ಕರೆದೊಯ್ಯುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ನಮ್ಮ ಪಕ್ಷ ಪಾಲಿಕೆಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲಿದೆ’ ಎಂದು ತಿಳಿಸಿದರು.</p>.<p>‘ಬಿಎನ್ಪಿ ಬೆಂಗಳೂರು ನಗರಕ್ಕಷ್ಟೇ ಸೀಮಿತ. ಪಕ್ಷ ಈಗಾಗಲೇ ಮಿಷನ್ 50 ಅಭಿಯಾನ ಪ್ರಾರಂಭಿಸಿದೆ. ಪಾಲಿಕೆ ಚುನಾವಣೆಯಲ್ಲಿ 100 ವಾರ್ಡ್ಗಳಿಂದ ಸ್ಪರ್ಧಿಸಿ, ಕನಿಷ್ಠ 50 ವಾರ್ಡ್ಗಳಲ್ಲಿ ಜಯಗಳಿಸುವ ಗುರಿ ಮತ್ತು ವಿಶ್ವಾಸ ಇದೆ’ ಎಂದು ತಿಳಿಸಿದರು.</p>.<p>‘ಪೂರ್ವ ಮತ್ತು ದಕ್ಷಿಣ ಪಾಲಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಎನ್ಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು. ಭವಿಷ್ಯದಲ್ಲಿ ಐದೂ ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಸ್ಪರ್ಧಿಸಲಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<p>‘ಕೇವಲ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ನಮ್ಮ ಪಕ್ಷ ಕಾರ್ಯನಿರ್ವಹಿಸುವುದಿಲ್ಲ. ಕೋವಿಡ್ ಸೇರಿದಂತೆ ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪಕ್ಷದ ಕಾರ್ಯಕರ್ತರು ತೊಡಗಿಸಿಕೊಂಡಿದ್ದಾರೆ. ನಮ್ಮ ಕೆಲಸಗಳೇ ಪಕ್ಷದ ಪ್ರಣಾಳಿಕೆ, ಅವು ಮತವಾಗಿ ಪರಿವರ್ತನೆಯಾಗಲಿವೆ’ ಎಂದು ನುಡಿದರು.</p>.<p>ಬಿಎನ್ಪಿ ಯುವ ಘಟಕದ ಮುಖಂಡ ರಿಶ್ವಾನ್ಜಾಸ್ ರಾಘವನ್ ಮಾತನಾಡಿ, ‘ನಗರದ ಸಮಸ್ಯೆಗಳಿಗೆ ಹೊಸ ಕಾನೂನುಗಳು ಪರಿಹಾರವಲ್ಲ. ಬದಲಿಗೆ ಯುವ ನಾಯಕರ ಅವಶ್ಯವಿದೆ. ಇಲ್ಲಿ ಪ್ರತಿ ಯೋಜನೆಗೂ ಕಟ್ಟುನಿಟ್ಟಾದ ಗಡುವು ಇರಲಿದ್ದು, ಪ್ರತಿ ಅಧಿಕಾರಿಯೂ ಹೊಣೆಗಾರರು’ ಎಂದರು.</p>.<p>ಪಕ್ಷದ ಆಡಳಿತ ಮಂಡಳಿ ಮುಖ್ಯಸ್ಥೆ ಲಲಿತಾಂಬ ಬಿ.ವಿ. ಮಾತನಾಡಿ, ‘ನಾವು ಸಾಂಪ್ರದಾಯಿಕ ರಾಜಕೀಯ ಸೂತ್ರ ಪಾಲಿಸುವುದಿಲ್ಲ. ನಮ್ಮ ಮನೆಯಂತಿರುವ ಬೆಂಗಳೂರು ನಗರವನ್ನು ವೃತ್ತಿಪರ ಶೈಲಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿದ್ದೇವೆ’ ಎಂದು ತಿಳಿಸಿದರು.</p>.<p>ಈ ವೇಳೆ ವಿವಿಧ ವಾರ್ಡ್ಗಳಿಂದ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಬಿಎನ್ಪಿ ಉತ್ತರಹಳ್ಳಿ ವಾರ್ಡ್ ಮುಖ್ಯಸ್ಥ ನಿಶ್ಚಿತ್ ಅಶೋಕ್ ಕುಮಾರ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಜಿಬಿಎ ಕೇಂದ್ರೀಕೃತ ಆಡಳಿತ ಪದ್ಧತಿಯನ್ನು ಬೆಂಗಳೂರು ನವನಿರ್ಮಾಣ ಪಕ್ಷ(ಬಿಎನ್ಪಿ) ಖಂಡಿಸುತ್ತದೆ. ನಗರದ ಸುಸ್ಥಿರ ಅಭಿವೃದ್ಧಿಗೆ ‘ಏರಿಯಾ ಸಭಾ’ಗಳೇ ಅತ್ಯಂತ ಪರಿಣಾಮಕಾರಿ ಚೌಕಟ್ಟು’ ಎಂದು ಪಕ್ಷದ ಸಂಸ್ಥಾಪಕ ಶ್ರೀಕಾಂತ್ ನರಸಿಂಹನ್ ಶುಕ್ರವಾರ ಅಭಿಪ್ರಾಯಪಟ್ಟರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಡಳಿತದಲ್ಲಿ ವಿಕೇಂದ್ರೀಕರಣ ತರುವ ಮೂಲಕ ಬೆಂಗಳೂರು ನಗರವನ್ನು ಅಭಿವೃದ್ಧಿ ಪಥದೆಡೆಗೆ ಕರೆದೊಯ್ಯುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ನಮ್ಮ ಪಕ್ಷ ಪಾಲಿಕೆಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲಿದೆ’ ಎಂದು ತಿಳಿಸಿದರು.</p>.<p>‘ಬಿಎನ್ಪಿ ಬೆಂಗಳೂರು ನಗರಕ್ಕಷ್ಟೇ ಸೀಮಿತ. ಪಕ್ಷ ಈಗಾಗಲೇ ಮಿಷನ್ 50 ಅಭಿಯಾನ ಪ್ರಾರಂಭಿಸಿದೆ. ಪಾಲಿಕೆ ಚುನಾವಣೆಯಲ್ಲಿ 100 ವಾರ್ಡ್ಗಳಿಂದ ಸ್ಪರ್ಧಿಸಿ, ಕನಿಷ್ಠ 50 ವಾರ್ಡ್ಗಳಲ್ಲಿ ಜಯಗಳಿಸುವ ಗುರಿ ಮತ್ತು ವಿಶ್ವಾಸ ಇದೆ’ ಎಂದು ತಿಳಿಸಿದರು.</p>.<p>‘ಪೂರ್ವ ಮತ್ತು ದಕ್ಷಿಣ ಪಾಲಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಎನ್ಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು. ಭವಿಷ್ಯದಲ್ಲಿ ಐದೂ ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಸ್ಪರ್ಧಿಸಲಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<p>‘ಕೇವಲ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ನಮ್ಮ ಪಕ್ಷ ಕಾರ್ಯನಿರ್ವಹಿಸುವುದಿಲ್ಲ. ಕೋವಿಡ್ ಸೇರಿದಂತೆ ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪಕ್ಷದ ಕಾರ್ಯಕರ್ತರು ತೊಡಗಿಸಿಕೊಂಡಿದ್ದಾರೆ. ನಮ್ಮ ಕೆಲಸಗಳೇ ಪಕ್ಷದ ಪ್ರಣಾಳಿಕೆ, ಅವು ಮತವಾಗಿ ಪರಿವರ್ತನೆಯಾಗಲಿವೆ’ ಎಂದು ನುಡಿದರು.</p>.<p>ಬಿಎನ್ಪಿ ಯುವ ಘಟಕದ ಮುಖಂಡ ರಿಶ್ವಾನ್ಜಾಸ್ ರಾಘವನ್ ಮಾತನಾಡಿ, ‘ನಗರದ ಸಮಸ್ಯೆಗಳಿಗೆ ಹೊಸ ಕಾನೂನುಗಳು ಪರಿಹಾರವಲ್ಲ. ಬದಲಿಗೆ ಯುವ ನಾಯಕರ ಅವಶ್ಯವಿದೆ. ಇಲ್ಲಿ ಪ್ರತಿ ಯೋಜನೆಗೂ ಕಟ್ಟುನಿಟ್ಟಾದ ಗಡುವು ಇರಲಿದ್ದು, ಪ್ರತಿ ಅಧಿಕಾರಿಯೂ ಹೊಣೆಗಾರರು’ ಎಂದರು.</p>.<p>ಪಕ್ಷದ ಆಡಳಿತ ಮಂಡಳಿ ಮುಖ್ಯಸ್ಥೆ ಲಲಿತಾಂಬ ಬಿ.ವಿ. ಮಾತನಾಡಿ, ‘ನಾವು ಸಾಂಪ್ರದಾಯಿಕ ರಾಜಕೀಯ ಸೂತ್ರ ಪಾಲಿಸುವುದಿಲ್ಲ. ನಮ್ಮ ಮನೆಯಂತಿರುವ ಬೆಂಗಳೂರು ನಗರವನ್ನು ವೃತ್ತಿಪರ ಶೈಲಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿದ್ದೇವೆ’ ಎಂದು ತಿಳಿಸಿದರು.</p>.<p>ಈ ವೇಳೆ ವಿವಿಧ ವಾರ್ಡ್ಗಳಿಂದ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಬಿಎನ್ಪಿ ಉತ್ತರಹಳ್ಳಿ ವಾರ್ಡ್ ಮುಖ್ಯಸ್ಥ ನಿಶ್ಚಿತ್ ಅಶೋಕ್ ಕುಮಾರ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>