‘ಕೆಲವು ವರ್ಷಗಳ ಹಿಂದೆ ಸುಧಾಕರ್ ಮತ್ತು ಸ್ವರ್ಣಲತಾ ವಿಚ್ಛೇದನ ಪಡೆದುಕೊಂಡಿದ್ದರು. ಕೋರಮಂಗಲದ ತಮ್ಮ ಮನೆಗೆಸ್ವರ್ಣಲತಾ ನುಗ್ಗಿ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಸುಧಾಕರ್ ದೂರು ನೀಡಿದ್ದಾರೆ. ಅತಿಕ್ರಮ ಪ್ರವೇಶದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜಾಮೀನು ಸಹಿತ ಪ್ರಕರಣವಾದದ್ದರಿಂದ ಬಂಧಿಸಿಲ್ಲ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.