<p><strong>ಬೆಂಗಳೂರು: </strong>ಶ್ರೀರಾಮಪುರ ಬಳಿಯ ದಯಾನಂದ ರಸ್ತೆಯ ಮನೆಯೊಂದರಲ್ಲಿ ವಾಸವಿದ್ದ ರಾಹುಲ್ (30) ಹಾಗೂ ಅವರ ಪತ್ನಿ ರಾಣಿ (26) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.</p>.<p>'ಬಿಹಾರದ ದಂಪತಿ, ನಾಲ್ಕು ತಿಂಗಳ ಹಿಂದಷ್ಟೇ ನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಾಣಿ ಅವರ ಮೃತದೇಹವಿದೆ. ಅದರ ಬಳಿಯೇ ರಾಹುಲ್ ಮೃತದೇಹವಿದ್ದು, ಅವರು ವಿಷ ಸೇವಿಸಿ ಸಾವನ್ನಪ್ಪಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಲಾಕ್ಡೌನ್ ಆದಾಗಿನಿಂದ ದಂಪತಿ ಹೊರಗೆ ಹೆಚ್ಚು ಬಂದಿರಲಿಲ್ಲ. ನಗರದಲ್ಲಿ ಅವರು ಯಾವ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿಲ್ಲ’ ಎಂದರು.</p>.<p>‘ಶುಕ್ರವಾರ ಸಂಜೆ ಮನೆ ಮಾಲೀಕರು, ವಿದ್ಯುತ್ ಬಿಲ್ ಕೊಡಲು ಮನೆ ಬಳಿ ಹೋಗಿದ್ದರು. ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗಲೇ ವಿಷಯ ಗೊತ್ತಾಗಿದೆ. ಅವರೇ ಠಾಣೆಗೆ ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಸ್ಥಳಕ್ಕೆ ಭೇಟಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ದಂಪತಿಯ ಸಂಬಂಧಿಕರಿಗೂ ಮಾಹಿತಿ ನೀಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶ್ರೀರಾಮಪುರ ಬಳಿಯ ದಯಾನಂದ ರಸ್ತೆಯ ಮನೆಯೊಂದರಲ್ಲಿ ವಾಸವಿದ್ದ ರಾಹುಲ್ (30) ಹಾಗೂ ಅವರ ಪತ್ನಿ ರಾಣಿ (26) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.</p>.<p>'ಬಿಹಾರದ ದಂಪತಿ, ನಾಲ್ಕು ತಿಂಗಳ ಹಿಂದಷ್ಟೇ ನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ರಾಣಿ ಅವರ ಮೃತದೇಹವಿದೆ. ಅದರ ಬಳಿಯೇ ರಾಹುಲ್ ಮೃತದೇಹವಿದ್ದು, ಅವರು ವಿಷ ಸೇವಿಸಿ ಸಾವನ್ನಪ್ಪಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಲಾಕ್ಡೌನ್ ಆದಾಗಿನಿಂದ ದಂಪತಿ ಹೊರಗೆ ಹೆಚ್ಚು ಬಂದಿರಲಿಲ್ಲ. ನಗರದಲ್ಲಿ ಅವರು ಯಾವ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿಲ್ಲ’ ಎಂದರು.</p>.<p>‘ಶುಕ್ರವಾರ ಸಂಜೆ ಮನೆ ಮಾಲೀಕರು, ವಿದ್ಯುತ್ ಬಿಲ್ ಕೊಡಲು ಮನೆ ಬಳಿ ಹೋಗಿದ್ದರು. ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗಲೇ ವಿಷಯ ಗೊತ್ತಾಗಿದೆ. ಅವರೇ ಠಾಣೆಗೆ ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಸ್ಥಳಕ್ಕೆ ಭೇಟಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ದಂಪತಿಯ ಸಂಬಂಧಿಕರಿಗೂ ಮಾಹಿತಿ ನೀಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>