ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಎಸ್‌ಸಿ ರಚಿಸದ ಸರ್ಕಾರ: ಹೈಕೋರ್ಟ್ ನೋಟಿಸ್

Last Updated 22 ಜೂನ್ 2021, 21:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಅಡಳಿತ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಭದ್ರತಾ ಆಯೋಗ (ಎಸ್‌ಎಸ್‌ಸಿ) ಸ್ಥಾಪಿಸಲು ವಿಫಲವಾದ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಿದೆ.

ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ನೀಡಲು ಆದೇಶಿಸಿತು.

ರಾಜ್ಯ ಪೊಲೀಸ್ ಕಾಯ್ದೆ 1963ರ ಸೆಕ್ಷೆನ್ 20ಎ ಪ್ರಕಾರ ಭದ್ರತಾ ಆಯೋಗ ರಚಿಸುವುದು ಕಡ್ಡಾಯ. ಅದು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅರ್ಜಿದಾರರು ಹೇಳಿದರು.

‘ಪ್ರಕಾಶ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಪೊಲೀಸ್ ಕಾಯ್ದೆಗೆ ತಿದ್ದುಪಡಿಯನ್ನು ಸರ್ಕಾರ ತಂದಿದೆ. ಆದರೆ, ಎಸ್‌ಎಸ್‌ಸಿ ರಚನೆಯನ್ನೇ ಮಾಡಿಲ್ಲ’ ಎಂದು ಅರ್ಜಿದಾರರು ದೂರಿದರು.

ಈ ಸಂಬಂಧ ಒಂದು ತಿಂಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಪೀಠ, ವಿಚಾರಣೆಯನ್ನು ಜು.29ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT