<p><strong>ಬೆಂಗಳೂರು</strong>: ‘ದಲಿತರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸಮತ ಸೈನಿಕ ದಳ(ಎಸ್ಎಸ್ಡಿ) ನಿರಂತರವಾಗಿ ಹೋರಾಟ ಮಾಡುತ್ತಿದೆ’ ಎಂದು ಎಸ್ಎಸ್ಡಿ ರಾಷ್ಟ್ರೀಯ ಅಧ್ಯಕ್ಷ ಎಂ. ವೆಂಕಟಸ್ವಾಮಿ ಹೇಳಿದರು.</p>.<p>ಸಮತಾ ಸೈನಿಕ ದಳ ಶತಮಾನೋತ್ಸವದ ಅಂಗವಾಗಿ ಮಂಗಳವಾರ ನಡೆದ ‘ಶತದಿನಗಳ ಸಂಭ್ರಮ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದೇಶದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ಫಲಾನುಭವಿಗಳೆಲ್ಲರೂ ಎಸ್ಎಸ್ಡಿ ಸದಸ್ಯರಾಗಿದ್ದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ನಾಪತ್ತೆ ಆಗುತ್ತಿತ್ತು. ಎಲ್ಲ ವರ್ಗದ ಯುವಕರು, ಮಹಿಳೆಯರು ಎಸ್ಎಸ್ಡಿ ಸದಸ್ಯತ್ವ ಪಡೆದುಕೊಳ್ಳಬೇಕು’ ಎಂದರು.</p>.<p>‘ದೇಶದಲ್ಲಿ ಜಾತಿವಾದಿ, ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡಲು ಡಾ.ಬಿ.ಆರ್. ಅಂಬೇಡ್ಕರ್ ಅವರು 1924 ಸೆಪ್ಟೆಂಬರ್ 24ರಂದು ಎಸ್ಎಸ್ಡಿ ಸ್ಥಾಪಿಸಿದ್ದರು. ಇಂದಿಗೆ 100 ವರ್ಷಗಳನ್ನು ಪೂರೈಸಿರುವ ಎಸ್ಎಸ್ಡಿ ದೇಶದಾದ್ಯಂತ ಹಲವಾರು ಶಾಖೆಗಳನ್ನು ಹೊಂದಿದೆ’ ಎಂದರು.</p>.<p>’ಅಸ್ಪೃಶ್ಯತೆ ಆಚರಣೆಯ ವಿರುದ್ಧ ಎಸ್ಎಸ್ಡಿ ನಿರಂತರವಾಗಿ ಹೋರಾಟ ಮಾಡುತ್ತಿದೆ. ಮುಂಬರುವ 100 ದಿನಗಳಲ್ಲಿ ರಾಜ್ಯದಾದ್ಯಂತ 100 ಸಮತಾ ಸಮಾವೇಶಗಳನ್ನು ಆಯೋಜಿಸುವ ಮೂಲಕ ಎಸ್ಎಸ್ಡಿ ಶಕ್ತಿ ಪ್ರದರ್ಶನ ಮಾಡಲಾಗುತ್ತದೆ’ ಎಂದು ಹೇಳಿದರು.</p>.<p>ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಆರ್ಪಿಐ ಸತೀಶ್, ಜಿ. ಗೋವಿಂದಯ್ಯ, ಜಿ.ಸಿ. ವೆಂಕಟರಮಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದಲಿತರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸಮತ ಸೈನಿಕ ದಳ(ಎಸ್ಎಸ್ಡಿ) ನಿರಂತರವಾಗಿ ಹೋರಾಟ ಮಾಡುತ್ತಿದೆ’ ಎಂದು ಎಸ್ಎಸ್ಡಿ ರಾಷ್ಟ್ರೀಯ ಅಧ್ಯಕ್ಷ ಎಂ. ವೆಂಕಟಸ್ವಾಮಿ ಹೇಳಿದರು.</p>.<p>ಸಮತಾ ಸೈನಿಕ ದಳ ಶತಮಾನೋತ್ಸವದ ಅಂಗವಾಗಿ ಮಂಗಳವಾರ ನಡೆದ ‘ಶತದಿನಗಳ ಸಂಭ್ರಮ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ದೇಶದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ಫಲಾನುಭವಿಗಳೆಲ್ಲರೂ ಎಸ್ಎಸ್ಡಿ ಸದಸ್ಯರಾಗಿದ್ದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ನಾಪತ್ತೆ ಆಗುತ್ತಿತ್ತು. ಎಲ್ಲ ವರ್ಗದ ಯುವಕರು, ಮಹಿಳೆಯರು ಎಸ್ಎಸ್ಡಿ ಸದಸ್ಯತ್ವ ಪಡೆದುಕೊಳ್ಳಬೇಕು’ ಎಂದರು.</p>.<p>‘ದೇಶದಲ್ಲಿ ಜಾತಿವಾದಿ, ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡಲು ಡಾ.ಬಿ.ಆರ್. ಅಂಬೇಡ್ಕರ್ ಅವರು 1924 ಸೆಪ್ಟೆಂಬರ್ 24ರಂದು ಎಸ್ಎಸ್ಡಿ ಸ್ಥಾಪಿಸಿದ್ದರು. ಇಂದಿಗೆ 100 ವರ್ಷಗಳನ್ನು ಪೂರೈಸಿರುವ ಎಸ್ಎಸ್ಡಿ ದೇಶದಾದ್ಯಂತ ಹಲವಾರು ಶಾಖೆಗಳನ್ನು ಹೊಂದಿದೆ’ ಎಂದರು.</p>.<p>’ಅಸ್ಪೃಶ್ಯತೆ ಆಚರಣೆಯ ವಿರುದ್ಧ ಎಸ್ಎಸ್ಡಿ ನಿರಂತರವಾಗಿ ಹೋರಾಟ ಮಾಡುತ್ತಿದೆ. ಮುಂಬರುವ 100 ದಿನಗಳಲ್ಲಿ ರಾಜ್ಯದಾದ್ಯಂತ 100 ಸಮತಾ ಸಮಾವೇಶಗಳನ್ನು ಆಯೋಜಿಸುವ ಮೂಲಕ ಎಸ್ಎಸ್ಡಿ ಶಕ್ತಿ ಪ್ರದರ್ಶನ ಮಾಡಲಾಗುತ್ತದೆ’ ಎಂದು ಹೇಳಿದರು.</p>.<p>ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಆರ್ಪಿಐ ಸತೀಶ್, ಜಿ. ಗೋವಿಂದಯ್ಯ, ಜಿ.ಸಿ. ವೆಂಕಟರಮಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>