10ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿತ್ಯ ಮನೆಯಲ್ಲಿಯೇ ಪರೀಕ್ಷೆಗೆ ತಯಾರಿ ನಡೆಸಿದ್ದ. ಮಧ್ಯಾಹ್ನ 1 ಗಂಟೆಗೆ ಅಂಗಡಿಗೆ ಹೋಗುವುದಾಗಿ ಹೇಳಿ ಹೊರಹೋಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇಲಿಂದ ಜಿಗಿದ ರಭಸಕ್ಕೆ ಆತನ ತಲೆ ಹೋಳಾಗಿ ಮೆದುಳು ಚಿಲ್ಲಾಪಿಲ್ಲಿಯಾಗಿದೆ. ಸ್ಥಳೀಯರು ಆದಿತ್ಯನನ್ನು ಗುರುತಿಸಿ ಪೋಷಕರಿಗೆ ಮಾಹಿತಿ ನೀಡಿ
ದ್ದಾರೆ. ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ಎಂ.ಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.