<p><strong>ಬೆಂಗಳೂರು:</strong> ಕನಕಪುರ ರಸ್ತೆಯ ಬ್ರಿಗೇಡ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನ 108 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರೆ ಆರಂಭಗೊಂಡಿದೆ.</p>.<p>ಸೇಂಟ್ ಜಾನ್ಸ್ ನ್ಯಾಷನಲ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್, ಬ್ರಿಗೇಡ್ ಫೌಂಡೇಶನ್ ಸಹಯೋಗದಲ್ಲಿ ಸ್ಥಾಪಿಸಿರುವ ಆಸ್ಪತ್ರೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು, ‘ಅತ್ಯುತ್ತಮ ನುರಿತ ವೈದ್ಯರು, ರೋಗ ಪತ್ತೆ ಹಚ್ಚುವ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಆಸ್ಪತ್ರೆಯಲ್ಲಿ ಬೆಂಗಳೂರು ದಕ್ಷಿಣ ಹಾಗೂ ಗ್ರಾಮೀಣ ಜನರಿಗೆ ಕೈಗೆಟಕುವ ದರದಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ಲಭಿಸಲಿದೆ’ ಎಂದರು.</p>.<p>ಸೇಂಟ್ ಜಾನ್ಸ್ ನಿರ್ದೇಶಕ ಆರ್. ಜೇಸುದಾಸ್, ‘ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ಒದಗಿಸಲು ಸಂಸ್ಥೆ ಬದ್ಧವಾಗಿದೆ. ಲಾಭಕ್ಕಿಂತ ಸೇವೆಯ ಧ್ಯೇಯದ ಆಧಾರದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿದ್ದೇವೆ. ಇಂತಹ ಜನಪರ ಕಾರ್ಯಕ್ಕೆ ಬ್ರಿಗೇಡ್ ಸಂಸ್ಥೆ ಕೈಜೋಡಿಸಿರುವುದು ಹೆಮ್ಮೆಯ ಸಂಗತಿ’ ಎಂದು ಹೇಳಿದರು.</p>.<p>ಬ್ರಿಗೇಡ್ ಫೌಂಡೇಶನ್ ಕಾರ್ಯನಿರ್ವಾಹಕ ಅಧ್ಯಕ್ಷ ಎಂ.ಆರ್. ಜೈಶಂಕರ್, ‘ಕೋವಿಡ್ ಸಮಯದಲ್ಲಿ 10 ಹಾಸಿಗೆಯ ಆಸ್ಪತ್ರೆ ತೆರೆಯವ ಮೂಲಕ ಎಂಟು ಸಾವಿರ ಜನರ ಸಂಕಷ್ಟಕ್ಕೆ ಸ್ಪಂದಿಸಲಾಗಿತ್ತು. ಈಗ ಅದೇ ಜಾಗದಲ್ಲಿ 108 ಹಾಸಿಗೆಗಳ ಆಸ್ಪತ್ರೆ ತಲೆ ಎತ್ತಿದೆ. ಸ್ಥಳೀಯರಿಗೆ ಸಾಕಷ್ಟು ಪ್ರಯೋಜನವಾಗಲಿದೆ’ ಎಂದರು.</p>.<p>ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಎಸ್.ಟಿ. ಸೋಮಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನಕಪುರ ರಸ್ತೆಯ ಬ್ರಿಗೇಡ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನ 108 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರೆ ಆರಂಭಗೊಂಡಿದೆ.</p>.<p>ಸೇಂಟ್ ಜಾನ್ಸ್ ನ್ಯಾಷನಲ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್, ಬ್ರಿಗೇಡ್ ಫೌಂಡೇಶನ್ ಸಹಯೋಗದಲ್ಲಿ ಸ್ಥಾಪಿಸಿರುವ ಆಸ್ಪತ್ರೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿದ ಅವರು, ‘ಅತ್ಯುತ್ತಮ ನುರಿತ ವೈದ್ಯರು, ರೋಗ ಪತ್ತೆ ಹಚ್ಚುವ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಆಸ್ಪತ್ರೆಯಲ್ಲಿ ಬೆಂಗಳೂರು ದಕ್ಷಿಣ ಹಾಗೂ ಗ್ರಾಮೀಣ ಜನರಿಗೆ ಕೈಗೆಟಕುವ ದರದಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ಲಭಿಸಲಿದೆ’ ಎಂದರು.</p>.<p>ಸೇಂಟ್ ಜಾನ್ಸ್ ನಿರ್ದೇಶಕ ಆರ್. ಜೇಸುದಾಸ್, ‘ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ಒದಗಿಸಲು ಸಂಸ್ಥೆ ಬದ್ಧವಾಗಿದೆ. ಲಾಭಕ್ಕಿಂತ ಸೇವೆಯ ಧ್ಯೇಯದ ಆಧಾರದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿದ್ದೇವೆ. ಇಂತಹ ಜನಪರ ಕಾರ್ಯಕ್ಕೆ ಬ್ರಿಗೇಡ್ ಸಂಸ್ಥೆ ಕೈಜೋಡಿಸಿರುವುದು ಹೆಮ್ಮೆಯ ಸಂಗತಿ’ ಎಂದು ಹೇಳಿದರು.</p>.<p>ಬ್ರಿಗೇಡ್ ಫೌಂಡೇಶನ್ ಕಾರ್ಯನಿರ್ವಾಹಕ ಅಧ್ಯಕ್ಷ ಎಂ.ಆರ್. ಜೈಶಂಕರ್, ‘ಕೋವಿಡ್ ಸಮಯದಲ್ಲಿ 10 ಹಾಸಿಗೆಯ ಆಸ್ಪತ್ರೆ ತೆರೆಯವ ಮೂಲಕ ಎಂಟು ಸಾವಿರ ಜನರ ಸಂಕಷ್ಟಕ್ಕೆ ಸ್ಪಂದಿಸಲಾಗಿತ್ತು. ಈಗ ಅದೇ ಜಾಗದಲ್ಲಿ 108 ಹಾಸಿಗೆಗಳ ಆಸ್ಪತ್ರೆ ತಲೆ ಎತ್ತಿದೆ. ಸ್ಥಳೀಯರಿಗೆ ಸಾಕಷ್ಟು ಪ್ರಯೋಜನವಾಗಲಿದೆ’ ಎಂದರು.</p>.<p>ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಎಸ್.ಟಿ. ಸೋಮಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>