ಎಐಎನ್ಎಸ್ಡಬ್ಲ್ಯು ಕೋರ್ ಕಮಿಟಿ ಸದಸ್ಯ ಅಕ್ರಮ್ ಪಾಷಾ, ‘ಲೈಂಗಿಕ ಕಾರ್ಯಕರ್ತೆಯರು ಕೂಡ ಕಾನೂನಿನ ಅಡಿಯಲ್ಲಿ ಘನತೆಯಿಂದ ಬದುಕಲು ಹಾಗೂ ಸಮಾನ ರಕ್ಷಣೆಯನ್ನು ಪಡೆಯಲು ಅರ್ಹರೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈಗಲೂ ಅವರ ಮೇಲೆ ವಿವಿಧ ರೀತಿಯ ಶೋಷಣೆಗಳು ನಡೆಯುತ್ತಿವೆ. ಅವರ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಅಧಿಕಾರಿಗಳು ಅರಿವಿನ ಕೊರತೆಯಿಂದ ಅವರಿಗೆ ತೊಂದರೆ ನೀಡುತ್ತಿದ್ದಾರೆ. ಅವರಿಗೂ ಘನತೆಯಿಂದ ಬದುಕಲು ಅವಕಾಶ ನೀಡಿ, ಸರ್ಕಾರಿ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.