‘ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಕಳೆದ ಕೆಲ ವರ್ಷಗಳ ಹಿಂದೆ ಕೈ ಬಿಡಲಾಗಿದೆ. ಮತ್ತೆ ಈ ಯೋಜನೆ ಜಾರಿ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಲಾಗಿತ್ತು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಹಲವು ಶಾಸಕರು ಒತ್ತಾಯಿಸಿದ್ದರು. ಆದರೂ, ಬಜೆಟ್ ಭಾಷಣದಲ್ಲಿ ಉಲ್ಲೇಖವಾಗಿಲ್ಲ. ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಜಾರಿಗೆ ಪ್ರಯತ್ನಿಸಲಾಗುವುದು’ ಎಂದರು.