ಬೆಂಗಳೂರು: ಯಶವಂತಪುರ ವ್ಯಾಪ್ತಿಯಲ್ಲಿ ಹೋಂ ಐಸೊಲೇಷನ್ನಲ್ಲಿರುವ ಕೋವಿಡ್ ರೋಗಿಗಳ ಕುಟುಂಬಗಳಿಗೆಪಡಿತರ ಕಿಟ್ ಹಾಗೂ ಔಷಧಗಳನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ವಿತರಿಸಿದರು.
‘ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರ ಪರಿಸ್ಥಿತಿ ಕಷ್ಟದಲ್ಲಿರುತ್ತದೆ. ಅವರೊಂದಿಗೆ ಮನೆಯಲ್ಲಿರುವ ಸದಸ್ಯರೂ ಹೊರಗೆ ಬರಲು ಸಾಧ್ಯವಾಗುವುದಿಲ್ಲ. ಇಂತಹ ಐದು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಉಚಿತವಾಗಿ ಪಡಿತರ ಕಿಟ್ ಹಾಗೂ ಔಷಧ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.
‘ಸೋಂಕಿನ ಬಗ್ಗೆ ಭಯ ಬೇಡ. ಸೂಕ್ತ ಚಿಕಿತ್ಸೆ ಪಡೆದುಕೊಂಡರೆ, ಈ ಸೋಂಕು ಗುಣವಾಗಲಿದೆ. ಯಾರೂ ಆತಂಕಗೊಳ್ಳುವುದು ಬೇಡ’ ಎಂದರು.