<p><strong>ರಾಜರಾಜೇಶ್ವರಿನಗರ:</strong> ‘ಗ್ರಾಮೀಣ ಸಂಸ್ಕೃತಿ ಹಾಗೂ ಜಾನಪದ ಕಲೆಯಿಂದ ಮಾತ್ರ ದೇಶದ ಸಂಸ್ಕೃತಿ ಮತ್ತಷ್ಟು ಗಟ್ಟಿಯಾಗಿ ಬೆಳೆದಿದೆ. ನಾವೆಲ್ಲರೂ ಒಗ್ಗೂಡಿ ನಮ್ಮ ಸಂಸ್ಕೃತಿ, ಪರಂಪರೆ, ಜಾನಪದ ಕಲೆಯನ್ನು ಉಳಿಸಬೇಕು’ ಎಂದುಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕನ್ನಲ್ಲಿಯ ಅಲ್ಲಮ ಕಲಾ ಶಾಲೆ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ‘ಸುಗ್ಗಿಹುಗ್ಗಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕನ್ನಲ್ಲಿಯ ವೀರಶೈವ ನಿತ್ಯಾನ್ನ ದಾಸೋಹ ಸಮಿತಿಯ ಅಧ್ಯಕ್ಷ ಎಸ್.ಶಾಂತರಾಜು,‘ ಜಾನಪದ ಕಲೆ, ನಾಟಕ, ಧಾರ್ಮಿಕ ಸಂಸ್ಕೃತಿಯು ಭಾವೈಕ್ಯತೆ, ಸಹೋದರತೆ, ಮಾನವೀಯ ಮೌಲ್ಯಗಳನ್ನು ಹೆಚ್ಚಿಸುತ್ತವೆ. ಕಲೆಯಿಂದ ಮಾತ್ರ ಸಂಸ್ಕಾರ, ವಿಶ್ವಾಸ ಬೆಳೆಯುತ್ತದೆ’ ಎಂದರು.</p>.<p>ರಂಗಕರ್ಮಿ ಕೆ.ವಿ.ನಾಗರಾಜಮೂರ್ತಿ,‘ಯುವಜನಾಂಗಕ್ಕೆ ನಾಡಿನ ಜಾನಪದ ಕಲೆ, ಕ್ರೀಡೆ, ಸಂಸ್ಕೃತಿಯನ್ನು ತಿಳಿಸುವ ಅಗತ್ಯವಿದೆ. ಇದಕ್ಕಾಗಿ ಪ್ರತಿವರ್ಷ ರಾಜ್ಯಮಟ್ಟದ ಸುಗ್ಗಿಹುಗ್ಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ‘ಗ್ರಾಮೀಣ ಸಂಸ್ಕೃತಿ ಹಾಗೂ ಜಾನಪದ ಕಲೆಯಿಂದ ಮಾತ್ರ ದೇಶದ ಸಂಸ್ಕೃತಿ ಮತ್ತಷ್ಟು ಗಟ್ಟಿಯಾಗಿ ಬೆಳೆದಿದೆ. ನಾವೆಲ್ಲರೂ ಒಗ್ಗೂಡಿ ನಮ್ಮ ಸಂಸ್ಕೃತಿ, ಪರಂಪರೆ, ಜಾನಪದ ಕಲೆಯನ್ನು ಉಳಿಸಬೇಕು’ ಎಂದುಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕನ್ನಲ್ಲಿಯ ಅಲ್ಲಮ ಕಲಾ ಶಾಲೆ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ‘ಸುಗ್ಗಿಹುಗ್ಗಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕನ್ನಲ್ಲಿಯ ವೀರಶೈವ ನಿತ್ಯಾನ್ನ ದಾಸೋಹ ಸಮಿತಿಯ ಅಧ್ಯಕ್ಷ ಎಸ್.ಶಾಂತರಾಜು,‘ ಜಾನಪದ ಕಲೆ, ನಾಟಕ, ಧಾರ್ಮಿಕ ಸಂಸ್ಕೃತಿಯು ಭಾವೈಕ್ಯತೆ, ಸಹೋದರತೆ, ಮಾನವೀಯ ಮೌಲ್ಯಗಳನ್ನು ಹೆಚ್ಚಿಸುತ್ತವೆ. ಕಲೆಯಿಂದ ಮಾತ್ರ ಸಂಸ್ಕಾರ, ವಿಶ್ವಾಸ ಬೆಳೆಯುತ್ತದೆ’ ಎಂದರು.</p>.<p>ರಂಗಕರ್ಮಿ ಕೆ.ವಿ.ನಾಗರಾಜಮೂರ್ತಿ,‘ಯುವಜನಾಂಗಕ್ಕೆ ನಾಡಿನ ಜಾನಪದ ಕಲೆ, ಕ್ರೀಡೆ, ಸಂಸ್ಕೃತಿಯನ್ನು ತಿಳಿಸುವ ಅಗತ್ಯವಿದೆ. ಇದಕ್ಕಾಗಿ ಪ್ರತಿವರ್ಷ ರಾಜ್ಯಮಟ್ಟದ ಸುಗ್ಗಿಹುಗ್ಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>