<p><strong>ಬೆಂಗಳೂರು</strong>: ವಿಧಾನಸಭೆಯಲ್ಲಿ ಹತ್ತನೇ ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅಳವಡಿಸಬೇಕು ಹಾಗೂ ಮೈಸೂರು ವಿಮಾನ ನಿಲ್ದಾಣಕ್ಕೆ ಚಾಮರಾಜ ಒಡೆಯರ್ ಹೆಸರಿಡಬೇಕು ಎಂದು ಕೋರಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ರಾಜಪರಂಪರೆಯ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಪರಿಕಲ್ಪನೆ ಹೊಂದಿ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದವರು ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್. ರಾಜ್ಯಕ್ಕೆ ಉತ್ತಮ ಹೆಸರು ತಂದು ಕೊಡುವಲ್ಲಿ ಅಂದಿನ ಮೈಸೂರು ಮಹಾಸಂಸ್ಥಾನದ ಮಹಾರಾಜರ ಕೊಡುಗೆಗಳೂ ಸಾಕಷ್ಟಿವೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಕರ್ನಾಟಕ ಇಂದು ದೇಶ-ವಿದೇಶದಲ್ಲಿ ಹೆಸರು ಗಳಿಸಲು ಮೈಸೂರು ಹಾಗೂ ಮಹಾರಾಜರ ಕೊಡುಗೆ ಅಪಾರವಾಗಿದೆ. ಜೊತೆಗೆ ಸ್ವತಃ ರಾಜಮಾತೆಯವರೇ ಪತ್ರ ಬರೆದು ಕೋರಿದ್ದು, ಅವರಿಗೆ ಗೌರವ ಸೂಚಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<p><strong>ಪ್ರಶಂಸೆ:</strong>‘ಮುಖ್ಯಮಂತ್ರಿ ಮತ್ತು ಸಭಾಧ್ಯಕ್ಷರಿಗೆ ಪತ್ರ ಬರೆದು ಇಂತಹ ಕಾರ್ಯಕ್ಕೆ ಮುಂದಾಳತ್ವ ವಹಿಸಿರುವ ಎಸ್.ಟಿ. ಸೋಮಶೇಖರ್ ನಡೆ ಪ್ರಶಂಸನಾರ್ಹ’ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸಭೆಯಲ್ಲಿ ಹತ್ತನೇ ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅಳವಡಿಸಬೇಕು ಹಾಗೂ ಮೈಸೂರು ವಿಮಾನ ನಿಲ್ದಾಣಕ್ಕೆ ಚಾಮರಾಜ ಒಡೆಯರ್ ಹೆಸರಿಡಬೇಕು ಎಂದು ಕೋರಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ರಾಜಪರಂಪರೆಯ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಪರಿಕಲ್ಪನೆ ಹೊಂದಿ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದವರು ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್. ರಾಜ್ಯಕ್ಕೆ ಉತ್ತಮ ಹೆಸರು ತಂದು ಕೊಡುವಲ್ಲಿ ಅಂದಿನ ಮೈಸೂರು ಮಹಾಸಂಸ್ಥಾನದ ಮಹಾರಾಜರ ಕೊಡುಗೆಗಳೂ ಸಾಕಷ್ಟಿವೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಕರ್ನಾಟಕ ಇಂದು ದೇಶ-ವಿದೇಶದಲ್ಲಿ ಹೆಸರು ಗಳಿಸಲು ಮೈಸೂರು ಹಾಗೂ ಮಹಾರಾಜರ ಕೊಡುಗೆ ಅಪಾರವಾಗಿದೆ. ಜೊತೆಗೆ ಸ್ವತಃ ರಾಜಮಾತೆಯವರೇ ಪತ್ರ ಬರೆದು ಕೋರಿದ್ದು, ಅವರಿಗೆ ಗೌರವ ಸೂಚಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<p><strong>ಪ್ರಶಂಸೆ:</strong>‘ಮುಖ್ಯಮಂತ್ರಿ ಮತ್ತು ಸಭಾಧ್ಯಕ್ಷರಿಗೆ ಪತ್ರ ಬರೆದು ಇಂತಹ ಕಾರ್ಯಕ್ಕೆ ಮುಂದಾಳತ್ವ ವಹಿಸಿರುವ ಎಸ್.ಟಿ. ಸೋಮಶೇಖರ್ ನಡೆ ಪ್ರಶಂಸನಾರ್ಹ’ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>