‘ಹಲವು ಗ್ರಾಮ ಪಂಚಾಯಿತಿಗಳಲ್ಲಿ ಸ್ಮಶಾನ ಇಲ್ಲದಿರುವುದರಿಂದ ಸರ್ಕಾರಿ ಜಾಗಗಳನ್ನು ಗುರುತಿಸಿ, ಸ್ಮಶಾನಕ್ಕೆ ಜಾಗ ಒದಗಿಸಬೇಕು. ಕೆಲವೆಡೆ ಭೂಮಿ ಲಭ್ಯವಿದ್ದರೂ ಜಾಗ ಮಾಡಿಕೊಟ್ಟಿಲ್ಲ. ನಗರಕ್ಕೆ ಹಲವು ಗ್ರಾಮಗಳು ಹೊಂದಿಕೊಂಡಿವೆ. ಆದರೆ, ಅಂತ್ಯಕ್ರಿಯೆಗೆ ಸೂಕ್ತ ಜಾಗವಿಲ್ಲ. ಸ್ಮಶಾನದ ಜಾಗಗಳಿಗೆಒತ್ತುವರಿಯಾಗದಂತೆ ತಂತಿಬೇಲಿ ಹಾಕಬೇಕು.ಕೋವಿಡ್ ಸಮಯದಲ್ಲಿ ಆರಂಭಿಸಿದ ವಿದ್ಯುತ್ ಚಿತಾಗಾರಗಳಿಗೆ ಮೂಲ ಸೌಕರ್ಯ ಒದಗಿಸಬೇಕು’ ಎಂದರು.