<p><strong>ಬೆಂಗಳೂರು:</strong> ‘ಎಪಿಎಂಸಿ ಕಾಯ್ದೆ ರೈತರಿಗೆ ಉಪಕಾರಿಯಾಗಿದೆ. ಎಪಿಎಂಸಿಗಳು, ಬಹುರಾಷ್ಟ್ರೀಯ ಕಂಪನಿಗಳು ಸೇರಿದಂತೆ ಯಾರಿಗೆ ಬೇಕಾದರೂ ನೇರವಾಗಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>‘ರಾಜ್ಯದಲ್ಲಿ 162 ಎಪಿಎಂಸಿಗಳು ಇವೆ. ಯಾವುದೇ ಕಾರಣಕ್ಕೂ ಈ ಸಮಿತಿಗಳನ್ನು ಮುಚ್ಚುವುದಿಲ್ಲ. ಅವುಗಳ ಅಧಿಕಾರವನ್ನೂ ಮೊಟಕುಗೊಳಿಸುವುದಿಲ್ಲ. ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಮೊದಲು ಎಪಿಎಂಸಿ ಸೆಸ್ ಅನ್ನು ₹1 ಮಾಡಿದ್ದೆವು. ಈ ದರ ಹೆಚ್ಚಾಯಿತು ಎಂಬ ದೂರುಗಳು ಬಂದಿದ್ದರಿಂದ ಸಂಪುಟದಲ್ಲಿ ಚರ್ಚೆ<br />ನಡೆಸಿ, 35 ಪೈಸೆಗೆ ನಿಗದಿ ಮಾಡಿದ್ದೇವೆ. ಇದರಿಂದ ಎಪಿಎಂಸಿಗಳಿಗೆ ವರ್ಷಕ್ಕೆ ₹120 ಕೋಟಿ ಆದಾಯ ಬರುತ್ತದೆ. ಇದರಿಂದ ಇವುಗಳ ಕಾರ್ಯನಿರ್ವಹಣೆ ಅಥವಾ ವ್ಯವಸ್ಥೆ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ’ ಎಂದು ವಿವರಿಸಿದರು.</p>.<p>‘ಈ ಕಾಯ್ದೆ ತರುವುದಕ್ಕೆ ಮುನ್ನ 50ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳಿಗೆ ಉತ್ಪನ್ನ ಮಾರಾಟ ಮಾಡುವುದಕ್ಕೆ ಈ ಹಿಂದಿನ ಸರ್ಕಾರವೇ ಅನುಮತಿ ಕೊಟ್ಟಿತ್ತು. ಇದರಿಂದ ರೈತರಿಗೆ ಯಾವುದೇ ಸಮಸ್ಯೆ ಆಗಿಲ್ಲ.ಈಗಿನ ನೂತನ ಕಾಯ್ದೆಯಿಂದ, ಖರೀದಿದಾರರ ನಡುವೆ ಪೈಪೋಟಿ ಏರ್ಪಟ್ಟು ರೈತರಿಗೇ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಬಹುರಾಷ್ಟ್ರೀಯ ಕಂಪನಿಗಳು ಅಕ್ರಮ ಎಸಗಿದರೆ, ರೈತರಿಗೆ ಹಣ ಸರಿಯಾಗಿ ನೀಡದಿದ್ದರೆ, ಅಂತಹ ಪರವಾನಗಿಯನ್ನೇ ರದ್ದುಪಡಿಸಲಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಎಪಿಎಂಸಿ ಕಾಯ್ದೆ ರೈತರಿಗೆ ಉಪಕಾರಿಯಾಗಿದೆ. ಎಪಿಎಂಸಿಗಳು, ಬಹುರಾಷ್ಟ್ರೀಯ ಕಂಪನಿಗಳು ಸೇರಿದಂತೆ ಯಾರಿಗೆ ಬೇಕಾದರೂ ನೇರವಾಗಿ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>‘ರಾಜ್ಯದಲ್ಲಿ 162 ಎಪಿಎಂಸಿಗಳು ಇವೆ. ಯಾವುದೇ ಕಾರಣಕ್ಕೂ ಈ ಸಮಿತಿಗಳನ್ನು ಮುಚ್ಚುವುದಿಲ್ಲ. ಅವುಗಳ ಅಧಿಕಾರವನ್ನೂ ಮೊಟಕುಗೊಳಿಸುವುದಿಲ್ಲ. ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಮೊದಲು ಎಪಿಎಂಸಿ ಸೆಸ್ ಅನ್ನು ₹1 ಮಾಡಿದ್ದೆವು. ಈ ದರ ಹೆಚ್ಚಾಯಿತು ಎಂಬ ದೂರುಗಳು ಬಂದಿದ್ದರಿಂದ ಸಂಪುಟದಲ್ಲಿ ಚರ್ಚೆ<br />ನಡೆಸಿ, 35 ಪೈಸೆಗೆ ನಿಗದಿ ಮಾಡಿದ್ದೇವೆ. ಇದರಿಂದ ಎಪಿಎಂಸಿಗಳಿಗೆ ವರ್ಷಕ್ಕೆ ₹120 ಕೋಟಿ ಆದಾಯ ಬರುತ್ತದೆ. ಇದರಿಂದ ಇವುಗಳ ಕಾರ್ಯನಿರ್ವಹಣೆ ಅಥವಾ ವ್ಯವಸ್ಥೆ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ’ ಎಂದು ವಿವರಿಸಿದರು.</p>.<p>‘ಈ ಕಾಯ್ದೆ ತರುವುದಕ್ಕೆ ಮುನ್ನ 50ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳಿಗೆ ಉತ್ಪನ್ನ ಮಾರಾಟ ಮಾಡುವುದಕ್ಕೆ ಈ ಹಿಂದಿನ ಸರ್ಕಾರವೇ ಅನುಮತಿ ಕೊಟ್ಟಿತ್ತು. ಇದರಿಂದ ರೈತರಿಗೆ ಯಾವುದೇ ಸಮಸ್ಯೆ ಆಗಿಲ್ಲ.ಈಗಿನ ನೂತನ ಕಾಯ್ದೆಯಿಂದ, ಖರೀದಿದಾರರ ನಡುವೆ ಪೈಪೋಟಿ ಏರ್ಪಟ್ಟು ರೈತರಿಗೇ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಬಹುರಾಷ್ಟ್ರೀಯ ಕಂಪನಿಗಳು ಅಕ್ರಮ ಎಸಗಿದರೆ, ರೈತರಿಗೆ ಹಣ ಸರಿಯಾಗಿ ನೀಡದಿದ್ದರೆ, ಅಂತಹ ಪರವಾನಗಿಯನ್ನೇ ರದ್ದುಪಡಿಸಲಾಗುತ್ತದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>