<p><strong>ರಾಜರಾಜೇಶ್ವರಿ ನಗರ:</strong> ‘ಕೊಳಚೆ ನೀರು ಸೇರಿ ಕೆರೆ ಕಲುಷಿತಗೊಂಡು ಪ್ರಾಣಿ, ಪಕ್ಷಿ, ಜನರ ಆರೋಗ್ಯ ಹದಗೆಡುತ್ತಿದೆ. ಅಲ್ಲದೆ, ಜಲಚರ ಪ್ರಾಣಿಗಳೂ ವಿನಾಶದ ಹಂತ ತಲುಪುತ್ತಿವೆ. ಕೆರೆಗಳನ್ನು ರಕ್ಷಿಸದೇ ಇದ್ದಲ್ಲಿ ಪ್ರಕೃತಿಯನ್ನೇ ಕಳೆದುಕೊಳ್ಳುವ ಹಂತಕ್ಕೆ ನಾವು ತಲುಪಬೇಕಾಗುತ್ತದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>.<p>ತಾವರೆಕೆರೆಯಲ್ಲಿರುವ ಗಂಗಮ್ಮ ಕೆರೆಯನ್ನು ₹5ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳ ಅಭಿವೃದ್ಧಿ ಜೊತೆಗೆ, ಅವುಗಳ ಸುತ್ತ–ಮುತ್ತವಿವಿಧ ತಳಿಯ ಔಷಧಿ ಗಿಡಗಳು, ಹಣ್ಣು, ಹೂವು ಬಿಡುವ ಮರಗಳನ್ನು ಬೆಳಸಲಾಗುವುದು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಸಮಾಜ ಸೇವಕ ಎಸ್.ಟಿ.ಕುಬೇರಸ್ವಾಮಿ, ಟಿ.ಎ.ಪಿ.ಎಂ.ಎಸ್ ಮಾಜಿ ಅಧ್ಯಕ್ಷ ಟಿ.ವಿ.ಸಿದ್ದಪ್ಪ, ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎನ್.ಕೃಷ್ಣಮೂರ್ತಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಎಸ್.ಕುಂಬಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ‘ಕೊಳಚೆ ನೀರು ಸೇರಿ ಕೆರೆ ಕಲುಷಿತಗೊಂಡು ಪ್ರಾಣಿ, ಪಕ್ಷಿ, ಜನರ ಆರೋಗ್ಯ ಹದಗೆಡುತ್ತಿದೆ. ಅಲ್ಲದೆ, ಜಲಚರ ಪ್ರಾಣಿಗಳೂ ವಿನಾಶದ ಹಂತ ತಲುಪುತ್ತಿವೆ. ಕೆರೆಗಳನ್ನು ರಕ್ಷಿಸದೇ ಇದ್ದಲ್ಲಿ ಪ್ರಕೃತಿಯನ್ನೇ ಕಳೆದುಕೊಳ್ಳುವ ಹಂತಕ್ಕೆ ನಾವು ತಲುಪಬೇಕಾಗುತ್ತದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.</p>.<p>ತಾವರೆಕೆರೆಯಲ್ಲಿರುವ ಗಂಗಮ್ಮ ಕೆರೆಯನ್ನು ₹5ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳ ಅಭಿವೃದ್ಧಿ ಜೊತೆಗೆ, ಅವುಗಳ ಸುತ್ತ–ಮುತ್ತವಿವಿಧ ತಳಿಯ ಔಷಧಿ ಗಿಡಗಳು, ಹಣ್ಣು, ಹೂವು ಬಿಡುವ ಮರಗಳನ್ನು ಬೆಳಸಲಾಗುವುದು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಸಮಾಜ ಸೇವಕ ಎಸ್.ಟಿ.ಕುಬೇರಸ್ವಾಮಿ, ಟಿ.ಎ.ಪಿ.ಎಂ.ಎಸ್ ಮಾಜಿ ಅಧ್ಯಕ್ಷ ಟಿ.ವಿ.ಸಿದ್ದಪ್ಪ, ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎನ್.ಕೃಷ್ಣಮೂರ್ತಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಎಸ್.ಕುಂಬಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>