ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾವರೆಕೆರೆ ತನಕ ಮೆಟ್ರೊ ಮಾರ್ಗಕ್ಕೆ ಮನವಿ; ಮುಖ್ಯಮಂತ್ರಿಗೆ ಶಾಸಕ ಸೋಮಶೇಖರ್ ಪತ್ರ

Last Updated 13 ಜನವರಿ 2020, 20:00 IST
ಅಕ್ಷರ ಗಾತ್ರ

ಬೆಂಗಳೂರು: ಮಾಗಡಿ ರಸ್ತೆ ಟೋಲ್‌ಗೇಟ್ ಬಳಿಯಿಂದ ತಾವರೆಕೆರೆ ತನಕ ‘ನಮ್ಮ ಮೆಟ್ರೊ‘ ರೈಲು ಮಾರ್ಗ ಕಲ್ಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಸೋಮವಾರ ಪತ್ರ ಬರೆದಿದ್ದಾರೆ.

‘ಕಾಮಾಕ್ಷಿಪಾಳ್ಯ, ಸುಮನಹಳ್ಳಿ ಜಂಕ್ಷನ್, ಸುಂಕದಕಟ್ಟೆ, ಅಂಜನಾನಗರ, ನೈಸ್ ರಸ್ತೆ ಜಂಕ್ಷನ್, ಚನ್ನೇನಹಳ್ಳಿ ಮಾರ್ಗವಾಗಿ ತಾವರೆಕೆರೆ ತನಕ ಜನವಸತಿ ಬಡಾವಣೆಗಳಿವೆ. ಕೆಂಪೇಗೌಡ ಬಸ್ ನಿಲ್ದಾಣ, ರೈಲು ನಿಲ್ದಾಣ, ಕೆ.ಆರ್. ಮಾರುಕಟ್ಟೆಗೆ ಪ್ರತಿನಿತ್ಯ ಸಾವಿರಾರು ಜನ ಸಂಚರಿಸುತ್ತಾರೆ. ಹೀಗಾಗಿ, ಮೆಟ್ರೊ ಮಾರ್ಗ ಕಲ್ಪಿಸಲು ಬಜೆಟ್‌ನಲ್ಲಿ ಅನುದಾನ ಕಾಯ್ದಿರಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

‘ಮಾಗಡಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸುಮನಹಳ್ಳಿ ವೃತ್ತದಿಂದ ಗೊಲ್ಲರಹಟ್ಟಿ ನೈಸ್ ಜಂಕ್ಷನ್ ತನಕ ಮೇಲ್ಸೇತುವೆ ನಿರ್ಮಾಣಕ್ಕೂ ಅನುದಾನ ಮೀಸಲಿಡಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT