ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ‘ಇನ್ನು ಮುಂದೆ ಯಾವುದೇ ಜಿಲ್ಲೆಗೆ ಭೇಟಿ ನೀಡಿದರೂ ಅಲ್ಲಿನ ಪಕ್ಷದ ಕಚೇರಿಗೆ ತಪ್ಪದೆ ಭೇಟಿ ನೀಡಿ ಕಾರ್ಯಕರ್ತರ ಜತೆ ವಿಚಾರ ವಿನಿಮಯ ಮಾಡುತ್ತೇನೆ. ಸರ್ಕಾರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಲು ಶ್ರಮಿಸುತ್ತೇನೆ’ ಎಂದು ತಿಳಿಸಿದ್ದಾರೆ.