ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಶಿಸ್ತು, ಔದಾರ್ಯಕ್ಕೆ ಬೆರಗಾದ ಸೋಮಶೇಖರ್

Last Updated 18 ಫೆಬ್ರುವರಿ 2020, 21:41 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಇತ್ತೀಚೆಗಷ್ಟೇ ಬಿಜೆಪಿ ಸೇರಿದವ ಎಂಬ ಮುಜುಗರ ಇತ್ತು. ಪಕ್ಷದ ಮೈಸೂರು ಕಚೇರಿಗೆ ಈಚೆಗೆ ತೆರಳಿದ್ದಾಗ ಅಲ್ಲಿನ ಕಾರ್ಯಕರ್ತರು ಮತ್ತು ಮುಖಂಡರು ತೋರಿದ ಪ್ರೀತಿ, ಔದಾರ್ಯದಿಂದಾಗಿ ನನ್ನಲ್ಲಿದ್ದ ಮುಜುಗರ ದೂರವಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ‘ಇನ್ನು ಮುಂದೆ ಯಾವುದೇ ಜಿಲ್ಲೆಗೆ ಭೇಟಿ ನೀಡಿದರೂ ಅಲ್ಲಿನ ಪಕ್ಷದ ಕಚೇರಿಗೆ ತಪ್ಪದೆ ಭೇಟಿ ನೀಡಿ ಕಾರ್ಯಕರ್ತರ ಜತೆ ವಿಚಾರ ವಿನಿಮಯ ಮಾಡುತ್ತೇನೆ. ಸರ್ಕಾರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಲು ಶ್ರಮಿಸುತ್ತೇನೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT