<p><strong>ಮೈಸೂರು:</strong> ‘ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದಾಗ ಅವರ ಪುತ್ರನೇನು ಕಡ್ಲೆಪುರಿ ತಿನ್ನುತ್ತಿದ್ದರಾ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು.</p>.<p>‘ಯಾವ ವಿಷಯದಲ್ಲೂ ಹಸ್ತಕ್ಷೇಪ ನಡೆಸದ ಬಿ.ವೈ.ವಿಜಯೇಂದ್ರ ವಿರುದ್ಧ, ರಾಜಕೀಯ ಕಾರಣಕ್ಕಾಗಿ ಈಗ ಸಿದ್ದರಾಮಯ್ಯ ಇಂಥ ಹೇಳಿಕೆ ನೀಡುತ್ತಿದ್ದಾರೆ. ಅದು ಸತ್ಯಕ್ಕೆ ದೂರವಾದ ವಿಚಾರ’ ಎಂದು ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಎಂ.ಟಿ.ಬಿ ನಾಗರಾಜ್ ಅವರಿಗೆ ಬಿಜೆಪಿಯಲ್ಲಿ ಯಾರೂ ಅಡ್ಡಗಾಲು ಹಾಕಿಲ್ಲ. ಈ ರೀತಿ ಹೇಳಿಯೇ ಅವರು ಸೋತಿದ್ದು’ ಎಂದು ಚಾಟಿ ಬೀಸಿದರು.</p>.<p>‘ಅಡಗೂರು ಎಚ್.ವಿಶ್ವನಾಥ್, ಎಂ.ಟಿ.ಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ಹಲವರು ವಿಧಾನಪರಿಷತ್ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಇವರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕೆಂಬುದು ನಮ್ಮ ಆಗ್ರಹವೂ ಆಗಿದೆ’ ಎಂದರು.</p>.<p>ಸಾಧಕರಿಗೆ ಗೌರವ: ರಾಜ್ಯಕ್ಕೆ ಹಾಗೂ ಮೈಸೂರಿಗೆ ಅಪಾರ ಕೊಡುಗೆ ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಡಿನ 10 ಗಣ್ಯರನ್ನು ಪ್ರತಿವರ್ಷ ಜಿಲ್ಲಾಡಳಿತದಿಂದ ಸನ್ಮಾನಿಸಲಾಗುವುದು. ಇದು ಈ ವರ್ಷದಿಂದಲೇ ಆರಂಭವಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದಾಗ ಅವರ ಪುತ್ರನೇನು ಕಡ್ಲೆಪುರಿ ತಿನ್ನುತ್ತಿದ್ದರಾ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನಿಸಿದರು.</p>.<p>‘ಯಾವ ವಿಷಯದಲ್ಲೂ ಹಸ್ತಕ್ಷೇಪ ನಡೆಸದ ಬಿ.ವೈ.ವಿಜಯೇಂದ್ರ ವಿರುದ್ಧ, ರಾಜಕೀಯ ಕಾರಣಕ್ಕಾಗಿ ಈಗ ಸಿದ್ದರಾಮಯ್ಯ ಇಂಥ ಹೇಳಿಕೆ ನೀಡುತ್ತಿದ್ದಾರೆ. ಅದು ಸತ್ಯಕ್ಕೆ ದೂರವಾದ ವಿಚಾರ’ ಎಂದು ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಎಂ.ಟಿ.ಬಿ ನಾಗರಾಜ್ ಅವರಿಗೆ ಬಿಜೆಪಿಯಲ್ಲಿ ಯಾರೂ ಅಡ್ಡಗಾಲು ಹಾಕಿಲ್ಲ. ಈ ರೀತಿ ಹೇಳಿಯೇ ಅವರು ಸೋತಿದ್ದು’ ಎಂದು ಚಾಟಿ ಬೀಸಿದರು.</p>.<p>‘ಅಡಗೂರು ಎಚ್.ವಿಶ್ವನಾಥ್, ಎಂ.ಟಿ.ಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ಹಲವರು ವಿಧಾನಪರಿಷತ್ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಇವರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕೆಂಬುದು ನಮ್ಮ ಆಗ್ರಹವೂ ಆಗಿದೆ’ ಎಂದರು.</p>.<p>ಸಾಧಕರಿಗೆ ಗೌರವ: ರಾಜ್ಯಕ್ಕೆ ಹಾಗೂ ಮೈಸೂರಿಗೆ ಅಪಾರ ಕೊಡುಗೆ ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಡಿನ 10 ಗಣ್ಯರನ್ನು ಪ್ರತಿವರ್ಷ ಜಿಲ್ಲಾಡಳಿತದಿಂದ ಸನ್ಮಾನಿಸಲಾಗುವುದು. ಇದು ಈ ವರ್ಷದಿಂದಲೇ ಆರಂಭವಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>