ಬೆಂಗಳೂರು: ಕುರುಬರ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಹೋರಾಟ ನಡೆಸಲು ರಚಿಸಲಾಗಿರುವ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಕಾಗಿನೆಲೆ ಮಹಾಸಂಸ್ಥಾನದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ತಿಂಥಣಿ ಶಾಖಾಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ, ಮೈಸೂರು ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ ಅವರು ಸಮಿತಿಯ ಮಾರ್ಗದರ್ಶಕರಾಗಿರುತ್ತಾರೆ.
ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಬಂಡೆಪ್ಪ ಕಾಶೆಂಪೂರ, ಎಚ್.ವಿಶ್ವನಾಥ್, ಎಚ್.ಎಂ. ರೇವಣ್ಣ ಗೌರವಾಧ್ಯಕ್ಷರಾಗಿದ್ದು, ಅಧ್ಯಕ್ಷರಾಗಿ ಕೆ. ವಿರೂಪಾಕ್ಷಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.