ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಕಾರಾಗೃಹ ಅಕ್ರಮ: ಸಿಬ್ಬಂದಿ ಕೈವಾಡ

Last Updated 20 ಜೂನ್ 2022, 20:16 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿದ್ದ ಎಡಿಜಿಪಿ ಮುರುಗನ್ ನೇತೃತ್ವದ ತಂಡ, ರಾಜ್ಯ ಸರ್ಕಾರಕ್ಕೆ 500 ಪುಟಗಳ ವರದಿ ಸಲ್ಲಿಸಿದೆ.

ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ, ಡ್ರಗ್ಸ್ ಪೂರೈಕೆ ಸೇರಿ ಹಲವು ಸೌಲಭ್ಯ ನೀಡಿರುವ ಬಗ್ಗೆ ಕೆಲ ತಿಂಗಳ ಹಿಂದೆಯಷ್ಟೇ ವಿಡಿಯೊಗಳು ಹರಿದಾಡಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ವಿಡಿಯೊ ಆಧರಿಸಿ ತನಿಖೆ ನಡೆಸುವಂತೆ ಎಡಿಜಿಪಿ ಮುರುಗನ್ ನೇತೃತ್ವದ ತಂಡ ರಚಿಸಿತ್ತು. ಕಾರಾಗೃಹಕ್ಕೆ ಭೇಟಿ ನೀಡಿದ್ದ ತಂಡ, ಸಿಬ್ಬಂದಿ ಹಾಗೂ ಕೈದಿಗಳನ್ನು ವಿಚಾರಣೆ ನಡೆಸಿತ್ತು. ತನಿಖೆ ಪೂರ್ಣಗೊಳಿಸಿರುವ ತಂಡ, ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಮೂಲಕ ವರದಿಯನ್ನು ರಾಜ್ಯ ಸರ್ಕಾರಕ್ಕೆ ಒಪ್ಪಿಸಿದೆ.

ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು: ‘ಜೈಲಿನಲ್ಲಿ ಅಕ್ರಮ ನಡೆದಿರುವುದು ತನಿಖೆಯಿಂದ ಗೊತ್ತಾಗಿದೆ. ಇದರಲ್ಲಿ 10 ಸಿಬ್ಬಂದಿ ಕೈವಾಡವಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ. ಜೈಲಿನ ವ್ಯವಸ್ಥೆಸುಧಾರಣೆಗೂ ಗಮನ ಹರಿಸಿ’ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT