<p><strong>ಮೈಸೂರು</strong>: ‘ಬೆಂಗಳೂರಿನಲ್ಲಿ ಆರ್ಸಿಬಿ ತಂಡದ ಗೆಲುವನ್ನು ಆಚರಿಸಲು ಬಂದಿದ್ದ ಅಭಿಮಾನಿಗಳ ದುರಂತ ಸಾವು ಮತ್ತು ಗಾಯಗಳಾಗಿರುವುದನ್ನು ತಿಳಿದು ಆಘಾತವಾಗಿದೆ’ ಎಂದು ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.</p><p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಆರ್ಸಿಬಿ ತಂಡದ ಅಪಾರ ಬೆಂಬಲ, ಜನರ ಆಚರಣೆ ಮತ್ತು ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರೂ ಸರಿಯಾಗಿ ನಿಭಾಯಿಸದೇ, ಪೂರ್ವ ಸಿದ್ಧತೆ ಇಲ್ಲದೆ ತರಾತುರಿಯಲ್ಲಿ ಕಾರ್ಯಕ್ರಮ ನಡೆಸಿದ್ದಕ್ಕಾಗಿ ಈ ರೀತಿಯ ಘಟನೆ ನಡೆದಿದೆ’ ಎಂದು ದೂರಿದ್ದಾರೆ.</p><p>‘ಇದು ಕೇವಲ ಭದ್ರತಾ ವೈಫಲ್ಯವಲ್ಲ, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ವೈಫಲ್ಯ. ರಾಜ್ಯ ಸರ್ಕಾರ ನಿಯೋಜಿತವಾಗಿ ಕಾರ್ಯನಿರ್ವಹಿಸಿ ಈ ದುರಂತವನ್ನು ತಡೆಯಬಹುದಿತ್ತು ಮತ್ತು ತಡೆಯಬೇಕಾಗಿತ್ತು’ ಎಂದು ಹೇಳಿದ್ದಾರೆ.</p><p>‘ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ. ರಾಜ್ಯ ಸರ್ಕಾರವು ಈ ನಿರ್ಲಕ್ಷ್ಯಕ್ಕೆ ಉತ್ತರಿಸಬೇಕು ಹಾಗೂ ಈ ರೀತಿಯ ವೈಫಲ್ಯಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.ಕಾಲ್ತುಳಿತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಗೃಹಸಚಿವ ಪರಮೇಶ್ವರ ಭೇಟಿ, ಪರಿಶೀಲನೆ.ಏನು ಭದ್ರತೆ ಕೈಗೊಂಡಿದ್ರಿ? 'RCB ಕಾಲ್ತುಳಿತ'ದ ಬಗ್ಗೆ ಹೈಕೋರ್ಟ್ ಪಿಐಎಲ್ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಬೆಂಗಳೂರಿನಲ್ಲಿ ಆರ್ಸಿಬಿ ತಂಡದ ಗೆಲುವನ್ನು ಆಚರಿಸಲು ಬಂದಿದ್ದ ಅಭಿಮಾನಿಗಳ ದುರಂತ ಸಾವು ಮತ್ತು ಗಾಯಗಳಾಗಿರುವುದನ್ನು ತಿಳಿದು ಆಘಾತವಾಗಿದೆ’ ಎಂದು ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.</p><p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಆರ್ಸಿಬಿ ತಂಡದ ಅಪಾರ ಬೆಂಬಲ, ಜನರ ಆಚರಣೆ ಮತ್ತು ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರಕ್ಕೆ ಗೊತ್ತಿದ್ದರೂ ಸರಿಯಾಗಿ ನಿಭಾಯಿಸದೇ, ಪೂರ್ವ ಸಿದ್ಧತೆ ಇಲ್ಲದೆ ತರಾತುರಿಯಲ್ಲಿ ಕಾರ್ಯಕ್ರಮ ನಡೆಸಿದ್ದಕ್ಕಾಗಿ ಈ ರೀತಿಯ ಘಟನೆ ನಡೆದಿದೆ’ ಎಂದು ದೂರಿದ್ದಾರೆ.</p><p>‘ಇದು ಕೇವಲ ಭದ್ರತಾ ವೈಫಲ್ಯವಲ್ಲ, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ವೈಫಲ್ಯ. ರಾಜ್ಯ ಸರ್ಕಾರ ನಿಯೋಜಿತವಾಗಿ ಕಾರ್ಯನಿರ್ವಹಿಸಿ ಈ ದುರಂತವನ್ನು ತಡೆಯಬಹುದಿತ್ತು ಮತ್ತು ತಡೆಯಬೇಕಾಗಿತ್ತು’ ಎಂದು ಹೇಳಿದ್ದಾರೆ.</p><p>‘ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ. ರಾಜ್ಯ ಸರ್ಕಾರವು ಈ ನಿರ್ಲಕ್ಷ್ಯಕ್ಕೆ ಉತ್ತರಿಸಬೇಕು ಹಾಗೂ ಈ ರೀತಿಯ ವೈಫಲ್ಯಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.ಕಾಲ್ತುಳಿತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಗೃಹಸಚಿವ ಪರಮೇಶ್ವರ ಭೇಟಿ, ಪರಿಶೀಲನೆ.ಏನು ಭದ್ರತೆ ಕೈಗೊಂಡಿದ್ರಿ? 'RCB ಕಾಲ್ತುಳಿತ'ದ ಬಗ್ಗೆ ಹೈಕೋರ್ಟ್ ಪಿಐಎಲ್ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>