<p><strong>ಬೆಂಗಳೂರು</strong>: ‘ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟವರ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಜಿಲ್ಲಾ ಆಸ್ಪತ್ರೆಗಳಲ್ಲಿ ನಡೆಯುತ್ತಿಲ್ಲ. ಎಲ್ಲ ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರಗಳನ್ನು ಕೂಡಲೇ ಪ್ರಾರಂಭಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.</p>.<p>ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯನ್ನು ಸೋಮವಾರ ಅವರು ನಡೆಸಿದರು.</p>.<p>‘ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು ಗಮನ ಹರಿಸಬೇಕು. ಅಂಗಾಂಗ ಪಡೆಯಲು ನಿರಾಸಕ್ತಿ ತೋರುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.</p>.<p>ರಾಜ್ಯದ ಮೂರು ಸ್ಥಳಗಳಲ್ಲಿ ಬೆಂಗಳೂರು ಮೆಡಿಕಲ್ ಸರ್ವಿಸ್ ಟ್ರಸ್ಟ್ (ಬಿಎಂಎಸ್ಟಿ) ಅಡಿಯಲ್ಲಿ ಹ್ಯೂಮನ್ ಲ್ಯುಕೋಸೈಟ್ ಆ್ಯಂಟಿಜೆನ್ (ಎಚ್ಎಲ್ಎ) ಪ್ರಯೋಗಾಲಯಗಳನ್ನು ಸ್ಥಾಪಿಸಲು ‘ಕೆಎಂಸಿ ಆ್ಯಂಡ್ ಆರ್ಐ’ ಮಾದರಿಯನ್ನು ಅನ್ವೇಷಿಸಬೇಕು ಎಂದರು.</p>.<p>ಜೀವಸಾರ್ಥಕತೆ ಸೊಸೈಟಿಯ ನೋಂದಣಿ ನವೀಕರಿಸಲು, ಕಾರ್ಯಾಚರಣಾ ವಲಯಗಳ ಸಂಖ್ಯೆಯನ್ನು ಐದರಿಂದ ಏಳಕ್ಕೆ ವಿಸ್ತರಿಸಲು ನಿರ್ಧರಿಸಲಾಯಿತು. ಸ್ಟೀರಿಂಗ್ ಸಮಿತಿಯನ್ನು ರಚಿಸುವುದರ ಜೊತೆಗೆ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟವರ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಜಿಲ್ಲಾ ಆಸ್ಪತ್ರೆಗಳಲ್ಲಿ ನಡೆಯುತ್ತಿಲ್ಲ. ಎಲ್ಲ ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರಗಳನ್ನು ಕೂಡಲೇ ಪ್ರಾರಂಭಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.</p>.<p>ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯನ್ನು ಸೋಮವಾರ ಅವರು ನಡೆಸಿದರು.</p>.<p>‘ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು ಗಮನ ಹರಿಸಬೇಕು. ಅಂಗಾಂಗ ಪಡೆಯಲು ನಿರಾಸಕ್ತಿ ತೋರುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.</p>.<p>ರಾಜ್ಯದ ಮೂರು ಸ್ಥಳಗಳಲ್ಲಿ ಬೆಂಗಳೂರು ಮೆಡಿಕಲ್ ಸರ್ವಿಸ್ ಟ್ರಸ್ಟ್ (ಬಿಎಂಎಸ್ಟಿ) ಅಡಿಯಲ್ಲಿ ಹ್ಯೂಮನ್ ಲ್ಯುಕೋಸೈಟ್ ಆ್ಯಂಟಿಜೆನ್ (ಎಚ್ಎಲ್ಎ) ಪ್ರಯೋಗಾಲಯಗಳನ್ನು ಸ್ಥಾಪಿಸಲು ‘ಕೆಎಂಸಿ ಆ್ಯಂಡ್ ಆರ್ಐ’ ಮಾದರಿಯನ್ನು ಅನ್ವೇಷಿಸಬೇಕು ಎಂದರು.</p>.<p>ಜೀವಸಾರ್ಥಕತೆ ಸೊಸೈಟಿಯ ನೋಂದಣಿ ನವೀಕರಿಸಲು, ಕಾರ್ಯಾಚರಣಾ ವಲಯಗಳ ಸಂಖ್ಯೆಯನ್ನು ಐದರಿಂದ ಏಳಕ್ಕೆ ವಿಸ್ತರಿಸಲು ನಿರ್ಧರಿಸಲಾಯಿತು. ಸ್ಟೀರಿಂಗ್ ಸಮಿತಿಯನ್ನು ರಚಿಸುವುದರ ಜೊತೆಗೆ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>